LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಕ್ತ, ನ್ಯಾಯ ಸಮ್ಮತ ಚುನಾವಣೆ ನಡೆಸಲು ಕಾಂಗ್ರೆಸ್ ವಿರುದ್ಧ ಕಠಿಣ ಜರುಗಿಸಿ

ಬೆಂಗಳೂರು: ವಾಮಮರ್ಗದಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಅಕ್ರಮಗಳನ್ನು ಎಸಗುತ್ತಿದೆ ಎಂದು ಜೆಡಿಎಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.


ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಅವರು ಸಹಿ ಮಾಡಿರುವ ಗ್ಯಾರಂಟಿ ಕಾರ್ಡುಗಳನ್ನು ಮತದಾರರಿಗೆ ಹಂಚಲಾಗುತ್ತಿದೆ. ಈ ಮೂಲಕ ಮುಗ್ಧ ಮತದಾರರಿಗೆ ಆಮಿಷ ಒಡ್ಡಿ ಅವರನ್ನು ವಂಚಿಸಲಾಗುತ್ತಿದೆ ಎಂದು ಜೆಡಿಎಸ್ ಆರೋಪ ಮಾಡಿದೆ.


ಮಾಜಿ ಸಚಿವ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಹಿರಿಯ ಮುಖಂಡ ಆರ್.ಪ್ರಕಾಶ್ ಅವರಿದ್ದ ನಾಯಕರ ನಿಯೋಗ ಕೇಂದ್ರೀಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ವಿರುದ್ಧ ದೂರು ನೀಡಿದೆ.


 ಪಾರದರ್ಶಕವಾಗಿ, ನಿರ್ಭೀತಿ, ಭ್ರಷ್ಟಾಚಾರ ರಹಿತವಾಗಿ ನಡೆಯಬೇಕಿದ್ದ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಗ್ಯಾರಂಟಿ ಕಾರ್ಡುಗಳನ್ನು ಹಂಚುವ ಮೂಲಕ ಕಲುಷಿತಗೊಳಿಸಿ ಅಕ್ರಮ ನಡೆಸುತ್ತಿದೆ. ನ್ಯಾಯ ಪತ್ರ ಹೆಸರಿನಲ್ಲಿ ಐದು ಗ್ಯಾರಂಟಿ ಕಾರ್ಡುಗಳ ಮೇಲೆ ಸಹಿ ಮಾಡಿ ಮತದಾರರಿಗೆ ಹಂಚಿಕೆ ಮಾಡುತ್ತಿರುವುದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಹಾಗೂ ಚುನಾವಣಾ ಅಕ್ರಮವೂ ಆಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಆ ಗ್ಯಾರಂಟಿ ಕಾರ್ಡುಗಳ ಹಂಚಿಯನ್ನು ತಡೆಯಬೇಕು ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಆಯೋಗವನ್ನು ಅಗ್ರಹಪಡಿಸಿದೆ.


ಅಷ್ಟೇ ಅಲ್ಲದೆ; ಜನತಾ ಪ್ರತಿನಿಧಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯು ಇದಾಗಿದ್ದು, ಕಾಂಗ್ರೆಸ್ ಚುನಾವಣಾ ಆಶಯವನ್ನೇ ಬುಡಮೇಲು ಮಾಡುತ್ತಿದೆ ಎಂಬ ಅಂಶವನ್ನು ಪಕ್ಷ ಆಯೋಗದ ಗಮನಕ್ಕೆ ತಂದಿದೆ.


ಅಲ್ಲದೆ, ಇಂತಹ ಭರವಸೆಗಳ ಮೂಲಕ ಕಾಂಗ್ರೆಸ್ ಕರ್ನಾಟಕ ಮತ್ತು ದೇಶದ ಆರ್ಥಿಕತೆ, ಬೊಕ್ಕಸಕ್ಕೆ ಹೊರಲಾರದ ಹೊರೆಯನ್ನು ಹೊರೆಸುತ್ತಿದೆ. ಆದ್ದರಿಂದ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವುದಕ್ಕೆ ಆಯೋಗ ಅತ್ಯಂತ ಕಠಿಣ ಕ ಜರುಗಿಸಬೇಕು ಎಂದು ಜೆಡಿಎಸ್ ಒತ್ತಾಯ ಮಾಡಿದೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ