LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಪುರದಲ್ಲಿ ಲುಲು, ಬಿಎಲ್ ಆಗ್ರೋ ಭಾರೀ ಹೂಡಿಕೆ: ಎಂ ಬಿ ಪಾಟೀಲ

ದಾವೋಸ್ (ಸ್ವಿರ್ಟರ್ಲೆಂಡ್): ರಾಜ್ಯದ ವಿಜಯಪುರದಲ್ಲಿ ಹೆಸರಾಂತ ಲುಲು ಗ್ರೂಪ್ ಮತ್ತು ಬಿಎಲ್ ಆಗ್ರೋ ಕಂಪನಿಗಳು ಆಹಾರ ಸಂಸ್ಕರಣೆ ವಲಯದಲ್ಲಿ ಬೃಹತ್ ಮೊತ್ತದ ಹೂಡಿಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದ ಜತೆ ಒಡಂಬಡಿಕೆ ಮಾಡಿಕೊಂಡವು

ಇಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಸಮಾವೇಶದಲ್ಲಿ ಪಾಲ್ಗೊಂಡಿರುವ ವಿಜಯಪುರ ಜಿಲ್ಲಾ ಸಚಿವರೂ ಆಗಿರುವ ಎಂ ಬಿ ಪಾಟೀಲ ಅವರ ಸಮ್ಮುಖದಲ್ಲಿ ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಮತ್ತು ಲುಲು ಕಂಪನಿ ವ್ಯವಸ್ಥಾಪಕ ನಿರ್ದೇಶಕ ಯೂಸುಫ್ ಅಲಿ ಅವರು ಒಪ್ಪಂದಕ್ಕೆ ಸಹಿ ಹಾಕಿದರು.ಈ ಮೂಲಕ ಪಾಟೀಲ ಅವರು ತವರು ಜಿಲ್ಲೆಗೆ ಸಿಹಿಸುದ್ದಿ ನೀಡಿದ್ದಾರೆ.

'ಕತಾರ್, ಕುವೈತ್, ಸೌದಿ ಅರೇಬಿಯಾ ಮತ್ತು ಈಜಿಪ್ಟ್ ನಲ್ಲಿ ಹೆಸರು ಮಾಡಿರುವ ಲುಲು ಗ್ರೂಪ್ 250 ಮಾಲ್ ಗಳನ್ನು ಹೊಂದಿದೆ. ಈಗ ಈ ಕಂಪನಿಯು ವಿಜಯಪುರದಲ್ಲಿ 300 ಕೋಟಿ ರೂಪಾಯಿ ಹೂಡಿಕೆ ಮಾಡಲಿದೆ ಎಂದು ಹೇಳಿದರು.

ಲುಲು ಗ್ರೂಪ್ ಸದ್ಯಕ್ಕೆ ಪ್ರತೀ ತಿಂಗಳು 250 ಟನ್ನುಗಳಷ್ಟು ಸೀಬೆಹಣ್ಣು, ಸಪೋಟ, ಹಸಿ ಮೆಣಸಿನಕಾಯಿ, ಬೆಂಡೇಕಾಯಿ, ಬದನೆಕಾಯಿ ಇತ್ಯಾದಿಗಳನ್ನು ಖರೀದಿಸುತ್ತಿದೆ. ವಿಜಯಪುರದಲ್ಲಿ ಜೋಳ, ದ್ರಾಕ್ಷಿ, ಹತ್ತಿ, ಕುಸುಬೆ, ಎಳ್ಳು, ಲಿಂಬೆ ಇತ್ಯಾದಿಗಳ ಕಣಜವಾಗಿದೆ. ಲುಲು ಹೂಡಿಕೆಯಿಂದ ಸ್ಥಳೀಯ ರೈತರಿಗೆ ಅನುಕೂಲ ಆಗಲಿದೆ ಎಂದು ಪಾಟೀಲ ವಿವರಿಸಿದ್ದಾರೆ.

ವಿಜಯಪುರದಲ್ಲಿ ಜಮೀನು, ನೀರು, ವಿದ್ಯುತ್ ಕೊರತೆ ಇಲ್ಲ. ಸದ್ಯದಲ್ಲೇ ವಿಮಾನ ನಿಲ್ದಾಣವೂ ಉದ್ಘಾಟನೆ ಆಗಲಿದೆ. ಇವೆಲ್ಲವನ್ನೂ ಪರಿಗಣಿಸಿ ವಿಜಯಪುರದಲ್ಲೇ ಹೂಡಿಕೆ ಮಾಡುವಂತೆ ಸಮೂಹದ ಮುಖ್ಯಸ್ಥ ಯೂಸುಫ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಉತ್ತರ ಪ್ರದೇಶ ಮೂಲದ ಬಿಎಲ್ ಗ್ರೂಪ್ ಕಂಪನಿಯು ದಕ್ಷಿಣ ಭಾರತದಲ್ಲಿ ತನ್ನ ಆಹಾರ ಸಂಸ್ಕರಣ ಘಟಕ ತೆರೆಯಲು ತೀರ್ಮಾನಿಸಿದ್ದು, ಇದಕ್ಕಾಗಿ ವಿಜಯಪುರವನ್ನು ಆಯ್ಕೆ ಮಾಡಿಕೊಂಡಿದೆ. ಈ ಸಂಬಂಧ ಕೂಡ ಒಡಂಬಡಿಕೆಗೆ ಅಂಕಿತ ಹಾಕಲಾಗಿದೆ ಎಂದು ಪಾಟೀಲ ಅವರು ವಿವರಿಸಿದ್ದಾರೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ