LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಮೆರಿಕದ ಸುಂಕ ಸಮರ: ಮಹತ್ತ್ವದ ಸಭೆ ನಡೆಸಿದ ಸಚಿವ ಎಂ ಬಿ ಪಾಟೀಲ

ಬೆಂಗಳೂರು: ಅಮೆರಿಕವು ಸಾರಿರುವ ಸುಂಕ ಸಮರ, ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಒಡಂಬಡಿಕೆಗಳ ಸ್ಥಿತಿಗತಿ ಮತ್ತು ಇತ್ತೀಚಿನ ಜಾಗತಿಕ ರಾಜಕೀಯ ಬೆಳವಣಿಗೆಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಬುಧವಾರ ಖನಿಜ ಭವನದಲ್ಲಿ ಮಹತ್ತ್ವದ ಸಭೆ ನಡೆಸಿ, ಚರ್ಚಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಅಮೆರಿಕವು ಭಾರತವೂ ಸೇರಿದಂತೆ ಹಲವು ದೇಶಗಳಿಂದ ಆಮದು ಮಾಡಿಕೊಳ್ಳುತ್ತಿರುವ ಉತ್ಪನ್ನಗಳ ಮೇಲೆ ಭಾರೀ ಸುಂಕ ಏರಲು ತೀರ್ಮಾನಿಸಿದೆ. ಸದ್ಯಕ್ಕೆ ಅದು ಪ್ರತಿಸುಂಕ ವಿಧಿಸುವುದನ್ನು ಮೂರು ತಿಂಗಳ ಕಾಲ ಮುಂದೂಡಿದೆ. ಅಮೆರಿಕದ ಈ‌ ಕ್ರಮ ಕರ್ನಾಟಕದ ಐಟಿ, ಬಿಟಿ, ಎಲೆಕ್ಟ್ರಾನಿಕ್ಸ್, ಫಾರ್ಮಸ್ಯೂಟಿಕಲ್, ರಕ್ಷಣಾ ಉತ್ಪನ್ನ ಮತ್ತಿತರ ರಫ್ತು ವಹಿವಾಟಿನ‌ ಮೇಲೆ ಯಾವ ರೀತಿಯ ಪರಿಣಾಮಗಳನ್ನು ಬೀರಲಿವೆ ಎನ್ನುವುದನ್ನು ಸಭೆಯಲ್ಲಿ ಅಂದಾಜು ಮಾಡಲಾಯಿತು ಎಂದು ಹೇಳಿದ್ದಾರೆ.

ಈ ಪರಿಸ್ಥಿತಿಯನ್ನು ರಾಜ್ಯವು ಸದವಕಾಶವಾಗಿ ಪರಿವರ್ತಿಸಿಕೊಳ್ಳಬೇಕಾಗಿದೆ. ಪ್ರತಿಸುಂಕದ ಹೊಡೆತಕ್ಕೆ ಹಲವು ದೇಶಗಳು, ಅನೇಕ ಉದ್ದಿಮೆಗಳು ನಲುಗಬಹುದು. ಅಂತಹ ಸಂದರ್ಭದಲ್ಲಿ ರಾಜ್ಯದ ಪಾತ್ರ ಹೇಗಿರಬೇಕು? ನಮ್ಮ ಹೂಡಿಕೆ ಒಪ್ಪಂದಗಳಿಗೆ ಯಾವ ತೊಂದರೆಯೂ ಆಗದಂತೆ ಹೇಗೆ ಮುನ್ನೆಚರಿಕೆ ವಹಿಸಬೇಕು ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಅವರು ವಿವರಿಸಿದ್ದಾರೆ.

ಸುಂಕ ಸಮರವನ್ನು ಒಂದು ದೇಶವಾಗಿ ಹೇಗೆ ಎದುರಿಸಬೇಕೆಂದು ಕೇಂದ್ರ ಸರಕಾರವು ಕೂಡ ಯೋಚಿಸುತ್ತಿದೆ. ಒಂದು ರಾಜ್ಯವಾಗಿ ಕರ್ನಾಟಕವು ಕೂಡ ಇದಕ್ಕೆ ಸಿದ್ಧವಾಗಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ಸಭೆಯಲ್ಲಿ ಬೋಸ್ಟನ್ ಕನ್ಸಲ್ಟೆನ್ಸಿ ಗ್ರೂಪ್ ನ ಅಂತರರಾಷ್ಟ್ರೀಯ ವ್ಯಾಪಾರ ತಜ್ಞ ಮೈಕೇಲ್ ಅವರು ಅಮೆರಿಕಾದಿಂದ ವರ್ಚುಯಲ್ ರೂಪದಲ್ಲಿ ಭಾಗವಹಿಸಿ, ಮಾಹಿತಿ ನೀಡಿದರು. ಸುಂಕ ಸಮರದ ಪರಿಣಾಮಗಳನ್ನು ವಿಶ್ಲೇಷಣೆ ಮಾಡುವ ಕೆಲಸ ನಡೆಯುತ್ತಿದ್ದು ಈ ಹಂತದಲ್ಲಿ ಹೀಗೆಯೇ ಆಗುತ್ತದೆಂದು ಹೇಳುವುದು ಕಷ್ಟ. ಸ್ಬಲ್ಪ ದಿನ ಕಾದು ನೋಡಬೇಕಾಗಿದೆ. ಚೀನಾದ ಮೇಲೆ ಹೆಚ್ಚು ತೆರಿಗೆ ಹಾಕಿದ್ದು, ಅದರ ಪರಿಣಾಮಗಳ ವಿಶ್ಲೇಷಣೆ ನಡೆದಿದೆ ಎಂದು ಮೈಕೇಲ್ ಮಾಹಿತಿ ನೀಡಿದರು.

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ವಾಣಿಜ್ಯ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ