LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಮೋಹನ್ ಕುಮಾರ್ ದಾನಪ್ಪ ಕಾರ್ಯ

ಬೆಂಗಳೂರು: ದೇಶದ 77ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು 24ನೇ ಕಾರ್ಗಿಲ್ ವಿಜಯ ದಿವಸ ಅಂಗವಾಗಿ ಕಾರ್ಗಿಲ್ ಯುದ್ಧದಲ್ಲಿ ಜೀವ ತ್ಯಾಗ ಮಾಡಿದ ವೀರಯೋಧರಿಗೆ ಗೌರವ ನಮನ ಸಲ್ಲಿಸುವ ಅಂಗವಾಗಿ "ಸಲಾಮ್ ಸೋಲ್ಜರ್ಸ್" ಶೀರ್ಷಿಕೆಯಡಿಯಲ್ಲಿ ಯುವಕರು ದೇಶ ಸೇವೆಗೆ ಸೇನೆ ಸೇರುವಂತೆ ಜಾಗೃತಿಗಾಗಿ 5 ಗಂಟೆ ನಿರಂತರ ಮ್ಯಾರಥಾನ್ ಓಟ ಓಡಿದ ಬಳ್ಳಾರಿ ಜಿಲ್ಲೆಯ ಕಂಪ್ಲಿ ನಿವಾಸಿ ಪ್ರಸ್ತುತ ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ವಕೀಲರಾಗಿ ಕಾರ್ಯನಿರ್ವಹಿಸುತ್ತಿರುವ ಮೋಹನ್ ಕುಮಾರ್‌ ದಾನಪ್ಪನವರು ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಮಾಡಿದ್ದಾರೆ

ಆಗಸ್ಟ್ 15 ರಂದು ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಕಾರ್ಗಿಲ್ ನಗರದಿಂದ ಕಾರ್ಗಿಲ್ ಯುದ್ದ ಸ್ಮಾರಕದವರೆಗೆ ಬಲಗೈನಲ್ಲಿ ರಾಷ್ಟ್ರಧ್ವಜ ಹಿಡಿದು ತಡೆರಹಿತವಾಗಿ ನಿರಂತರ 5 ಗಂಟೆಗಳ ಕಾಲಾವಧಿಯಲ್ಲಿ ಸಮುದ್ರ ಮಟ್ಟಕ್ಕಿಂತ 10.800 ಅಡಿ ಎತ್ತರದಲ್ಲಿರುವ ಆಮ್ಲಜನಕ ಕಡಿಮೆಯಿರುವ ಪ್ರದೇಶದಲ್ಲಿ 42 ಕಿಲೋ ಮೀಟರ್ ಓಡುವ ಮೂಲಕ ವಿನೂತನ ಮ್ಯಾರಥಾನ್‌ ಓಟ ನಡೆಸಿರುವ ಪ್ರಥಮ ವ್ಯಕ್ತಿಯೆಂದು ಪರಿಗಣಿಸಿದ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಂಸ್ಥೆಯ ಸಂಪಾದಕೀಯ ಮಂಡಳಿಯು ಸೆಪ್ಟೆಂಬರ್ 18, 2023 ರಂದು ದಾಖಲೆಗಳನ್ನ ಪರಿಶೀಲಿಸಿ ದೃಢೀಕರಿಸಿ ಆಯ್ಕೆ ಮಾಡಿ ಅನುಮೋದಿಸಿ ಭಾರತ ದಾಖಲೆ ಪುಸ್ತಕ (ಇಂಡಿಯಾ ಬುಕ್ ಆಫ್ ರೆಕಾರ್ಡ್)ಕ್ಕೆ ಮೋಹನ್ ಕುಮಾರ್‌ ದಾನಪ್ಪನವರನ್ನ ದಾಖಲೆಗಾರನೆಂದು ಸೇರ್ಪಡಿಸಲಾಗಿದೆ,

ಮೋಹನ್ ಕುಮಾರ್ ದಾನಪ್ಪನವರು ಸದರಿ ಓಟದಲ್ಲಿ ತೋರಿದ ತಾಳ್ಮೆ,ಧೈರ್ಯ ಹಾಗೂ ಪ್ರಯತ್ನ, ಇವರ ಕೌಶಲ್ಯವನ್ನ ಪ್ರಶಂಸಿಸಿ ಅಂಗೀಕರಿಸಲಾಗಿದೆ ಶೀಘ್ರದಲ್ಲೇ ಅಧಿಕೃತ ಪ್ರಮಾಣ ಪತ್ರ, ಪದಕ, ದಾಖಲೆ ಪುಸ್ತಕವನ್ನ ಮೋಹನ್‌ ಕುಮಾರ್‌ರವರಿಗೆ ಕಳುಹಿಸಲಾಗುವುದೆಂದು ಸಂಸ್ಥೆಯು ತಿಳಿಸಿದೆ!
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ