LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಫಿಸಿಯೋಥೆರಪಿ ಕೋರ್ಸ್‌ಗಳಿಗೆ ಈಗ ನೀಟ್ ಕಡ್ಡಾಯ: ಡಾ. ಶರಣ ಪ್ರಕಾಶ ಪಾಟೀಲ

ಬೆಂಗಳೂರು: ಫಿಸಿಯೋಥೆರಪಿ ಕೋರ್ಸ್‌ಗಳಿಗೆ ಪ್ರವೇಶವು ಈಗ ನೀಟ್ ವ್ಯಾಪ್ತಿಗೆ ಬರಲಿದೆ. ಇದು ಪ್ರಮಾಣೀಕೃತ ವೈದ್ಯಕೀಯ ಶಿಕ್ಷಣದತ್ತ ರಾಷ್ಟ್ರೀಯ ನಡೆಗೆ ಪೂರಕವಾಗಿರುತ್ತದೆ. ಸಾಮರ್ಥ್ಯ ಆಧಾರಿತ ಕಲಿಕೆ ಮತ್ತು ಹೆಚ್ಚುವರಿ ಕ್ಲಿನಿಕಲ್ ಮಾನ್ಯತೆಗಾಗಿ ಕೋರ್ಸ್ ಅವಧಿಯನ್ನು ಐದು ವರ್ಷಗಳಿಗೆ ವಿಸ್ತರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ತಿ ಳಿಸಿದ್ದಾರೆ.

ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಫಿಸಿಯೋಥೆರಪಿಯ ಅಂತಾರಾಷ್ಟ್ರೀಯ ಸಮ್ಮೇಳನವಾದ ಕರ್ನಾಟಕ ಫಿಸಿಯೋಕಾನ್ -25 ಉದ್ಘಾಟನಾ ಸಮಾರಂಭದಲ್ಲಿ ಸಚಿವರು ಭಾಷಣ ಮಾಡಿದರು, ಫಿಸಿಯೋಥೆರಪಿ ಕೋರ್ಸ್‌ಗಳ ಪ್ರವೇಶವನ್ನು ನೀಟ್ ವ್ಯಾಪ್ತಿಗೆ ಸೇರಿಸಲು ರಾಜ್ಯ ಸರ್ಕಾರದ ಬೆಂಬಲವಿದೆ. ಶೈಕ್ಷಣಿಕ ಗುಣಮಟ್ಟ ಮತ್ತು ವೃತ್ತಿಪರ ಮಾನದಂಡಗಳನ್ನು ಹೆಚ್ಚಿಸುವ ನೀಟ್ ಅಡಿಯಲ್ಲಿ ಭೌತಚಿಕಿತ್ಸೆಯ ಕೋರ್ಸ್‌ಗಳ ಏಕೀಕರಣವನ್ನು ನಾವು ಸ್ವಾಗತಿಸುತ್ತೇವೆ ಎಂದು ಅವರು ಹೇಳಿದರು.

*ಗಣನೀಯ ಸೇವೆ ನೀಡುತ್ತಿರುವ ಭೌತ ಚಿಕಿತ್ಸಕರು*


ಹೆರಿಗೆಯಿಂದ ವೃದ್ಧರ ಆರೈಕೆಯವರೆಗೆ, ಆರೋಗ್ಯ ರಕ್ಷಣೆಯಲ್ಲಿ ಭೌತಚಿಕಿತ್ಸಕರು ಪ್ರಮುಖ ಪಾತ್ರ ವಹಿಸುತ್ತಾರೆ. ಭೌತಚಿಕಿತ್ಸಕರು ನರ ಮತ್ತು ಮೂಳೆಚಿಕಿತ್ಸೆ ಪುನರ್‌ ಆರೈಕೆ, ಹೃದಯ ಶ್ವಾಸಕೋಶ ಆರೈಕೆ, ಮಕ್ಕಳ ಚಿಕಿತ್ಸೆ, ಅಂಗವೈಕಲ್ಯ ಚಿಕಿತ್ಸೆ, ಫಿಟ್ನೆಸ್ ಮತ್ತು ಸಮುದಾಯ ಆಧಾರಿತ ಆರೈಕೆಗೆ ಗಣನೀಯ ಕೊಡುಗೆ ನೀಡುತ್ತಾರೆ" ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ತರಬೇತಿ ಪಡೆದ ವೃತ್ತಿಪರರಿಗೆ ದೇಶೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಇದೆ. ಇದನ್ನು ಪೂರೈಸಲು ಹೆಚ್ಚಿನ ಸರ್ಕಾರಿ ಕಾಲೇಜುಗಳಲ್ಲಿ ಭೌತಚಿಕಿತ್ಸೆಯ ಕೋರ್ಸ್‌ಗಳನ್ನು ಪರಿಚಯಿಸುವ ಚಿಂತನೆ ಇದೆ ಎಂದು ಡಾ. ಶರಣ ಪ್ರಕಾಶ ಪಾಟೀಲ ತಿಳಿಸಿದರು.

*ಪಠ್ಯಕ್ರಮ ಬದಲಾವಣೆ*


ರಾಷ್ಟ್ರೀಯ ಅಲೈಡ್ & ಹೆಲ್ತ್ ಪ್ರೊಫೆಷನಲ್ಸ್ ಆಯೋಗದ ಅಧ್ಯಕ್ಷರಾದ ಡಾ. ಯಜ್ಞ ಶುಕ್ಲಾ ಮಾತನಾಡಿ, ಭೌತಚಿಕಿತ್ಸೆಯ ಶಿಕ್ಷಣದಲ್ಲಿ ಒಂದು ರಾಷ್ಟ್ರ, ಒಂದು ಪಠ್ಯಕ್ರಮ ಉಪಕ್ರಮವನ್ನು ಪರಿಚಯಿಸಲು ಆಯೋಗ ಚಿಂತನೆ ನಡೆಸಿದೆ ಎಂದು ಹೇಳಿದರು,

ಪಠ್ಯಕ್ರಮ ಸುಧಾರಣೆಗಳು ವಿದ್ಯಾರ್ಥಿಗಳು ಮತ್ತು ವೈದ್ಯರಿಗೆ ವಿಶೇಷ ಪ್ರಯೋಜನಗಳೊಂದಿಗೆ ವೃತ್ತಿಯನ್ನು ಉನ್ನತೀಕರಿಸುವ ಮಾನದಂಡವನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ಸಮ್ಮೇಳನದಲ್ಲಿ ಇಸ್ರೇಲ್, ಆಸ್ಟ್ರೇಲಿಯಾ ಮತ್ತು ನೇಪಾಳದ ಭಾಷಣಕಾರರು, ಜಾಗತಿಕ ತಜ್ಞರು ಹಾಗೂ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು, 50 ರಾಷ್ಟ್ರೀಯ ತಜ್ಞರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ 800 ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಮಂಡಿಸಲಾಯಿತು.

ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಫರೀದ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್ ಉಪಸ್ಥಿತರಿದ್ದರು

*ಕೆಎಸ್‌ಎಎಚ್‌ಸಿ ಹೊಸ ಕಚೇರಿ ಕಟ್ಟಡ ಉದ್ಘಾಟನೆ*


ಕರ್ನಾಟಕ ರಾಜ್ಯ ಅಲೈಡ್ ಹೆಲ್ತ್ ಸೈನ್ಸ್‌ ಕೌನ್ಸಿಲ್ (ಕೆಎಸ್‌ಎಎಚ್‌ಸಿ) ಹೊಸ ಕಟ್ಟಡ ಉದ್ಘಾಟನೆ ಮಾಡಿ ಮಾತನಾಡಿದವರು, ರಾಜ್ಯದಾದ್ಯಂತ ಅಲೈದು ಆರೋಗ್ಯ ರಕ್ಷಣಾ ಆವೃತ್ತಿಗಳ ನಿಯಂತ್ರಣ ಮತ್ತು ಗುರುತಿಸುವಿಕೆಯಲ್ಲಿ ಇದು ಮಾತ್ರ ಮೈಲುಗಲ್ಲಾಗಿದೆ ಕೆ ಎಸ್ ಎ ಎಚ್ ಸಿ ಯನ್ನು ರಾಷ್ಟ್ರೀಯ ಅಲೈದು ಮತ್ತು ಹೆಲ್ತ್ ಕೇರ್ ಪ್ರೊಫೆಶನ್ ಆಯೋಗ ಕಾಯ್ದೆ 2021 ಮಾರ್ಗದರ್ಶಿ ಅಡಿಯಲ್ಲಿ ಸ್ಥಾಪಿಸಲಾಗಿದೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಎಂದರು.

ಅಲೈಡ್ ಮತ್ತು ಹೆಲ್ತ್ ಕೇರ್ ಕ್ಷೇತ್ರದಲ್ಲಿ ಪದವಿಪೂರ್ವ ಸ್ನಾತಕೋತ್ತರ ಅಥವಾ ಡಿಪ್ಲೋಮೋ ಕೋರ್ಸ್ ಗಳನ್ನು ಪೂರ್ಣಗೊಳಿಸುವ ಎಲ್ಲಾ ಅಭ್ಯರ್ಥಿಗಳು ಭಾರತದ ಅಥವಾ ವಿದೇಶಗಳಲ್ಲಿ ಅಭ್ಯಾಸ ಮಾಡಲು ಅಥವಾ ಕೆಲಸ ಮಾಡಲು ತಮ್ಮ ಪದವಿಗಳು ಡಿಪ್ಲೋಮೋಗಳನ್ನು ಕೌನ್ಸಿಲ್ ನಲ್ಲಿ  ನೋದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಕೆಎಸ್‌ಎಎಚ್‌ಸಿ ಅಧ್ಯಕ್ಷ ಡಾ. ಯು.ಟಿ. ಇಫ್ತಿಕರ್ ಫರೀದ್ ಮಾತನಾಡಿ, ಸಮಗ್ರ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ವಿವಿಧ ವರ್ಗಗಳ ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ ಅಗತ್ಯ ಮೂಲಸೌಕರ್ಯ ವೆಬ್ಸೈಟ್ ಮತ್ತು ಆನ್ಲೈನ್ ನೊಂದಣಿ ಪೋರ್ಟಲ್ ನೊಂದಿಗೆ ಪೂರ್ಣಗೊಂಡ ಕೌನ್ಸಿಲ್ ಕಚೇರಿಯನ್ನು ಬೆಂಗಳೂರು ವೇದಿಕೆಯ ಕಾಲೇಜ್ ಸಂಪರ್ಕದಲ್ಲಿ ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಹೊಸದಾಗಿ ಉದ್ಘಾಟನೆಗೊಂಡಿರುವ ಕೌನ್ಸಿಲ್ ನಲ್ಲಿ ಕೆಲವು ಪ್ರಯೋಜನಗಳನ್ನು ಸಹ ಜಾರಿಗೆ ತರವಾಗಿದೆ, ಅವುಗಳಲ್ಲಿಖ್ಯವಾದವು ಅಸ್ತಿತ್ವದಲ್ಲಿರುವ ಹಾಗೂ ಮುಂಬರುವ ಅಲೈದು ಮತ್ತು ಹೆಲ್ತ್ ಕೇರ್ ಸಂಸ್ಥೆಗಳಿಗೆ ನಿಯಂತ್ರಕ ಸಂಸ್ಥೆಯಾಗಿ ಕಾರ್ಯನಿರ್ವಹಿಸಲಿದೆ, ಪದವಿ ಅಥವಾ ಡಿಪ್ಲೋಮಾ ಪ್ರಮಾಣಿಕರಣಕ್ಕಾಗಿ ಕಾಯುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ನೋಂದಣಿಯನ್ನು ಸುಖಮಯಗೊಳಿಸಲಿದೆ, ಪದವಿ ಅಥವಾ ಡಿಪ್ಲೋಮೋ ಪ್ರಮಾಣ ಪತ್ರಗಳ ತುಳಿಕರಣವನ್ನು ಸಹ ಪರಿಶೀಲನೆ ಮಾಡಲಾಗುತ್ತದೆ. ಪ್ರತಿವರ್ಗಕ್ಕೂ ಅನನ್ಯ ಗುರುತಿನ ಸಂಖ್ಯೆಗಳೊಂದಿಗೆ ನೋಂದಣಿ ಪ್ರಮಾಣ ಪತ್ರಗಳನ್ನು ಸಹ ಕೌನ್ಸಿಲ್ ನಲ್ಲಿ ನೀಡಲಾಗುತ್ತದೆ ಎಂದರು.

ಕೆ ಎಸ್ ಎ ಎಸ್ ಸಿ ಸ್ಥಾಪನೆಯೂ ಕರ್ನಾಟಕದ ಪ್ರಗತಿಯನ್ನು ಸೂಚಿಸುವುದಲ್ಲದೆ ಇತರ ರಾಜ್ಯಗಳಿಗೂ ಮಾದರಿಯಾಗಲಿದೆ ಎಂದರು. ಪೂರಕ ವೈದ್ಯಕೀಯ ಸೇವಾ ರಕ್ಷಣಾ ವೃತ್ತಿಪರನ್ನು ಸುಸರ್ಜಿತಗೊಳಿಸಲು ಹಾಗೂ ಗುರುತಿಸಲು ಸಾಮರ್ಥ್ಯ ಸಮಗ್ರತೆ ಮತ್ತು ಜಾಗತಿಕ ವಿಶ್ವಾಸಾರ್ಹತೆಯೊಂದಿಗೆ ಸೇವೆ ಸಲ್ಲಿಸಲು ಸಂಸ್ಥೆಯು ವಿಶ್ವಾಸದಿಂದ ಮುನ್ನುಗ್ಗಲಾಗುತ್ತದೆ ಎಂದರು.

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಕರ್ನಾಟಕ ರಾಜ್ಯ ಅಲೈಡ್ ಹೆಲ್ತ್ ಸೈನ್ಸ್‌ ಕೌನ್ಸಿಲ್ (ಕೆಎಸ್‌ಎಎಚ್‌ಸಿ) ನ ಹೊಸ ಕಚೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೆಎಸ್‌ಎಎಚ್‌ಸಿ ಅಧ್ಯಕ್ಷ ಡಾ. ಯು.ಟಿ. ಇಫ್ತಿಕರ್ ಫರೀದ್ ಸೇರಿದಂತೆ ಕೌನ್ಸಿಲ್ಲ ಆಡಳಿತ ಮಂಡಳಿ ಪದಾಧಿಕಾರಿಗಳು ವೈದ್ಯರು ವಿದ್ಯಾರ್ಥಿಗಳು ಇದೆ ವೇಳೆ ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ