LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯಾರನ್ನೂ ಗುರಿಯಾಗಿಸಿ ಹೇಳಿಲ್ಲ; ನೋವಾಗಿದ್ದರೆ ವಿಷಾದ – ವಿಜಯಾನಂದ ಕಾಶಪ್ಪನವರ್

ಬೆಂಗಳೂರು: ‘ಹೊಲಗೇರಿ’ ಎಂಬ ಪದ ಬಳಕೆ ಕುರಿತಂತೆ ಉಂಟಾಗಿರುವ ವಿವಾದಕ್ಕೆ ಸಣ್ಣ ಮತ್ತು ಸಾರ್ವಜನಿಕ ಉದ್ಯಮಗಳ ಇಲಾಖೆಯ ಸಚಿವ ವಿಜಯಾನಂದ ಕಾಶಪ್ಪನವರ ಸ್ಪಷ್ಟನೆ ನೀಡಿದ್ದಾರೆ.

ತಾವು ಯಾವುದೇ ಸಮುದಾಯವನ್ನಾಗಲಿ, ನಿರ್ದಿಷ್ಟ ವ್ಯಕ್ತಿಯನ್ನಾಗಲಿ ಗುರಿಯಾಗಿಸಿಕೊಂಡು ಆ ಪದವನ್ನು ಬಳಸಿಲ್ಲ .ಹಿಂದೆ ನೇಕಾರರ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡಿದ್ದ ಕ್ರಮಗಳ ಕುರಿತು ಟೀಕಿಸುವ ಸಂದರ್ಭದಲ್ಲಿ ಈ ಪದ ಬಳಕೆಯಾಗಿದೆ ಎಂದು  ಸ್ಪಷ್ಟಪಡಿಸಿದ್ದಾರೆ. 

ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಸಾಮಾಜಿಕ ಜಾಲತಾಣ ಹಾಗೂ ರಾಜಕೀಯ ವಲಯದಲ್ಲಿ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನನಗೆ ಎಲ್ಲ ಸಮುದಾಯಗಳ ಬಗ್ಗೆಯೂ ಅಪಾರವಾದ ಗೌರವವಿದೆ. ಯಾವುದೇ ಸಮುದಾಯವನ್ನಾಗಲಿ ಅಥವಾ ನಿರ್ದಿಷ್ಟ ವ್ಯಕ್ತಿಯನ್ನಾಗಲಿ ಗುರಿಯಾಗಿಸಿಕೊಂಡು ಈ ಪದವನ್ನು ಬಳಸಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಖಂಡಿತವಾಗಿಯೂ ವಿಷಾದ ವ್ಯಕ್ತಪಡಿಸುತ್ತೇನೆ” ಎಂದು ಕಾಶಪ್ಪನವರ ಹೇಳಿದ್ದಾರೆ.

ತಮ್ಮ ಕುಟುಂಬದ ರಾಜಕೀಯ ಹಿನ್ನೆಲೆಯನ್ನೂ ಪ್ರಸ್ತಾಪಿಸಿರುವ ಅವರು, ಕಳೆದ ಐದು ದಶಕಗಳಿಂದ ಕಾಶಪ್ಪನವರ ಕುಟುಂಬ ರಾಜಕೀಯ ಕ್ಷೇತ್ರದಲ್ಲಿದ್ದು, ಎಲ್ಲ ಜಾತಿ ಮತ್ತು ಧರ್ಮಗಳನ್ನು ಸಮಾನವಾಗಿ ಕಂಡು ಬಂದಿದೆ ಎಂದು ಹೇಳಿದ್ದಾರೆ.

ಅಣ್ಣ ಬಸವಣ್ಣನವರ ಸಮಾನತೆಯ ಆಶಯವನ್ನು ಪಾಲಿಸಿಕೊಂಡು, “ಇವ ನಮ್ಮವ, ಇವ ನಮ್ಮವ” ಎಂಬ ಭಾವನೆಯೊಂದಿಗೆ ಎಲ್ಲರನ್ನೂ ಸರಿಸಮಾನವಾಗಿ ಕಂಡು ಕುಟುಂಬ ರಾಜಕಾರಣ ನಡೆಸಿಕೊಂಡು ಬಂದಿದೆ ಎಂದು ಅವರು ಹೇಳಿದ್ದಾರೆ.

ತಾವು ರಾಜಕೀಯ ಕ್ಷೇತ್ರದಲ್ಲಿ ಬೆಳೆಯುತ್ತಿರುವುದನ್ನು ಸಹಿಸಿಕೊಳ್ಳಲಾಗದ ಕೆಲ ರಾಜಕೀಯ ವಿರೋಧಿಗಳು ತಮ್ಮ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸಿಕೊಂಡು ವಿವಾದ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಾರನ್ನೂ ಗುರಿಯಾಗಿಸಿ ಹೇಳಿಲ್ಲ; ನೋವಾಗಿದ್ದರೆ ವಿಷಾದ – ವಿಜಯಾನಂದ ಕಾಶಪ್ಪನವರ್ಕ್ಯಾನರಾಬ್ಯಾಂಕ್ ನಿಂದ 80ನೇ ಸ್ವಾತಂತ್ರ್ಯ ದಿನಾಚರಣೆ: ರಾಷ್ಟ್ರ ನಿರ್ಮಾಣದ ಬದ್ಧತೆಯ ಪುನರುಚ್ಚಾರಡಾಕ್ಟರ್ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ನರೇಂದ್ರ ಅಧಿಕಾರ ಸ್ವೀಕಾರಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತು ವತಿಯಿಂದ ರಾಷ್ಟ್ರಗೀತೆ ಕೈಬರಹ ಅಭಿಯಾನಹೊರ ವರ್ತುಲ ರಸ್ತೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಚಿವರ ಚರ್ಚೆಹಗರಿಬೊಮ್ಮನಹಳ್ಳಿಯಲ್ಲಿ ಲಾಕಪ್‌ಡೆತ್, ಪೊಲೀಸ್ ದೂರುಗಳ ಪ್ರಾಧಿಕಾರದಿಂದ ಸುಮೊಟೋ, ಎಸ್ಪಿಗೆ ನೋಟೀಸ್ರಿಹಾಬ್ ಕೇಂದ್ರದ ರೋಗಿಗಳನ್ನು ಮತದಾನದಿಂದ ವಂಚಿತರನ್ನಾಗಿಸದೆ ಎಸ್ ಐಆರ್ ಪ್ರಕ್ರಿಯೆಯಲ್ಲಿ ಸೇರಿಸಿಸಂಕಷ್ಟ ಸೂತ್ರ ರೂಪಿಸುವುದಕ್ಕೆ ನಿಮ್ಮ ಪ್ರಯತ್ನವೇನು ಎಂದು ಪ್ರಶ್ನಿಸಿದ ಕುಮಾರಸ್ವಾಮಿಜುಲೈ 1ರಿಂದ ಆಗಸ್ಟ್ 13ರವರೆಗೆ ಒಟ್ಟು 212.75 ಕಿ.ಮೀ. ಪಾದಚಾರಿ ಮಾರ್ಗ ಅತಿಕ್ರಮಣ ಮುಕ್ತ ಪಾಕಿಸ್ತಾನ,ಚೀನಾ ನಮಗೆ ಶತ್ರು ರಾಷ್ಟ್ರವಲ್ಲ ಪಾಕಿಸ್ತಾನವನ್ನು ದೀರ್ಘಕಾಲ ದ್ವೇಷಿಸಬಾರದು : ಮೋಹನ್ ಭಾಗವತ್