LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾರ್ತ್ ಹುಡ್ ಪ್ರದೇಶ ಹಾಗೂ ರಮಣಶ್ರೀ ಗಾರ್ಡೇನಿಯಾ ಲೇಔಟ್ ಪರಿಶೀಲನೆ

ಬೆಂಗಳೂರು: ನಗರದ ರಮಣಶ್ರೀ ಗಾರ್ಡೇನಿಯಾ ಲೇಔಟ್ ಹಾಗೂ ನಾರ್ತ್ ಹುಡ್ ವಿಲ್ಲಾ ಪ್ರದೇಶದಲ್ಲಿ ಮಳೆ ನೀರು ನಿಲ್ಲದಂತೆ ಶೀಘ್ರ ಪರ್ಯಾಯವಾಗಿ 520 ಮೀಟರ್ ಉದ್ದದ 1.600 ಎಂ.ಎಂ ಪೈಪ್ ಅಳವಡಿಸಲು ಪಾಲಿಕೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಯಲಹಂಕ ವಲಯದ ರಮಣಶ್ರೀ ಗಾರ್ಡೇನಿಯಾ ಲೇಔಟ್ ನಲ್ಲಿ ಕಳೆದ ಶನಿವಾರ ಸುರಿದ ಮಳೆಯಿಂದಾಗಿ ಸುಮಾರು 22 ವಿಲ್ಲಾಗಳಿಗೆ ನೀರು ನುಗ್ಗಿ ಸಮಸ್ಯೆಯುಂಟಾಗಿದ್ದ ಸ್ಥಳಕ್ಕೆ ಪಾಲಿಕೆ ಹಾಗೂ ಅರಣ್ಯ ಇಲಾಖೆ ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಪಾಲಿಕೆ ವತಿಯಿಂದ ರಾಜಕಾಲುವೆ ಕಾಮಗಾರಿ ಪ್ರಗತಿಯಲ್ಲಿದ್ದು, ಪುಟ್ಟೇನಹಳ್ಳಿ ಕರೆಯು ಅರಣ್ಯ ಇಲಾಖೆಗೆ ಬರಲಿದೆ. ಕೆರೆಯ ಪಕ್ಕದ ಪ್ರದೇಶದಲ್ಲಿ ವಿಲ್ಲಾ ಹಾಗೂ ಅಪಾರ್ಟ್ಮೆಂಟ್ಸ್ ಗಳು ನಿರ್ಮಾಣವಾಗಿದ್ದು, ಸೀವೇಜ್ ವ್ಯವಸ್ಥೆ ಸರಿಯಾಗಿಲ್ಲದ ಕಾರಣ ರಾಜಕಾಲುವೆ ನಿರ್ಮಾಣ ಮಾಡಿ ಕೆರೆಗೆ ನೀರನ್ನು ಬಿಡಲು ಅರಣ್ಯ ಇಲಾಖೆಯ ವನ್ಯಜೀವಿ ಮಂಡಳಿಯಿಂದ ಅನುಮತಿ ಸಿಕ್ಕಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಪರ್ಯಾಯವಾಗಿ 520 ಮೀಟರ್ ಉದ್ದದ 1.600 ಎಂ.ಎಂ ಪೈಪ್ ಲೈನ್ ಅನ್ನು ಕೆರೆಯ ವಾಯು ವಿಹಾರ ಮಾರ್ಗದ ಪಕ್ಕದಲ್ಲಿ ಮಾಡಿಕೊಂಡು ಮುಂದೆ ಬರುವ ರಾಜಕಾಲುವೆಗೆ ಸಂಪರ್ಕ ಕಲ್ಪಿಸಲಾಗುವುದು. ಈ ಪೈಕಿ ತ್ವರಿತವಾಗಿ ಕೆಲಸ ಪ್ರಾರಂಭಿಸಿ ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ರಮಣಶ್ರೀ ಲೇಔಟ್ ಪ್ರದೇಶದಲ್ಲಿ ಕಳೆದ ಒಂದೂವರೆ ವರ್ಷದ ಹಿಂದೆ ಯಾವುದೇ ಮನೆಗಳು ಇಲ್ಲದ ಕಾರಣ ಅಲ್ಲಿ ಯಾವುದೇ ಸಮಸ್ಯೆ ಕಂಡುಬಂದಿರಲಿಲ್ಲ. ಇದೀಗ ಸದರಿ ಸ್ಥಳದಲ್ಲಿ ವಿಲ್ಲಾ ಹಾಗೂ ಅಪಾರ್ಟ್ಮ್ಂಟ್ ಗಳು ನಿರ್ಮಾಣವಾಗಿರುವ ಕಾರಣ ಮಳೆ ನೀರು ನಿಲ್ಲುವಂತಾಗಿದೆ. ಸದರಿ ಸ್ಥಳದಲ್ಲಿ ತಾತ್ಕಾಲಿಕವಾಗಿ ಪಂಪ್ ವ್ಯವಸ್ಥೆ ಮಾಡಿಕೊಂಡು ನೀರನ್ನು ಬೇರೆಡೆ ಬಿಡಲಾಗುತ್ತಿದೆ ಎಂದು ಹೇಳಿದರು.

ರಮಣಶ್ರೀ ಗಾರ್ಡೇನಿಯಾ ಲೇಔಟ್ ನಲ್ಲಿ ನಿಂತಿದ್ದ ನೀರನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದ್ದು, ಸದ್ಯ ಯಾವುದೇ ಸಮಸ್ಯೆ ಇರುವುದಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ನಿಂತ ನೀರನ್ನು ತೆರವುಗೊಳಿಸುವ ಸಲುವಾಗಿ ಪಂಪ್ ಅನ್ನು ಅಲ್ಲಿಯೇ ಇಡಲಾಗುವುದು ಎಂದು ತಿಳಿಸಿದರು.

ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾದ  ಎನ್. ಮಂಜುನಾಥ್ ಪ್ರಸಾದ್ರ ವರು ಮಾತನಾಡಿ, ಯಲಹಂಕದ ರಮಣಶ್ರೀ ಗಾರ್ಡೇನಿಯಾ ಲೇವಟ್ ನಲ್ಲಿ ನೀರು ನಿಲ್ಲದಂತೆ ಕ್ರಮವಹಿಸಲು ಪಾಲಿಕೆಗೆ ಅರಣ್ಯ ಇಲಾಖೆ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದೆಂದು ತಿಳಿಸಿದರು.

ಈ ವೇಳೆ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾದ ಶ್ರೀ ಕುಮಾರ್ ಪುಷ್ಕರ್, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯಪಡೆ ಮುಖ್ಯಸ್ಥರಾದ ಬ್ರಿಜೇಶ್ ಕುಮಾರ್ ದೀಕ್ಷಿತ್, ವಲಯ ಆಯುಕ್ತರಾದ ಕರೀ ಗೌಡ, ಜಂಟಿ ಆಯುಕ್ತರಾರ ನಯೀಮ್ ಮೊಹ್ಮದ್ ಮೊಮಿನ್, ಕಾರ್ಯಪಾಲಕ ಅಭಿಯಂತರರಾದ ಸುಧಾಕರ್, ಸವಿತಾ, ಜಲಮಡಳಿ, ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ