LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲಕನ ಶ್ವಾಸಕೋಶದಲ್ಲಿದ್ದ ಗುಂಡು ಸೂಜಿ ಹೊರತೆಗೆದ ವೈದ್ಯರು

ರಾಯಚೂರು: ಆಟವಾಡುವಾಗ ಗುಂಡು ಸೂಜಿ ನುಂಗಿದ್ದ ಬಾಲಕನಿಗೆ ರಿಮ್ ಆಸ್ಪತ್ರೆ ವೈದ್ಯರು ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ಹೊಟ್ಟೆ ಸೇರಿದ್ದ ಸೂಜಿಯನ್ನು ಹೀರ ತೆಗೆದಿದ್ದಾರೆ.

ಸಿರವಾರ ತಾಲೂಕಿನ ಮುಚ್ಚುಳ ಕ್ಯಾಂಪ್ ನ 13ವರ್ಷದ ಕು.ಶಿವಕುಮಾರ ತಂದೆ ದೇವರಾಜ ಎಂಬ ಬಾಲಕ ಶಾಲೆಯಲ್ಲಿ ಆಟವಾಡುವಾಗ ಗುಂಡು ಸೂಜಿಯನ್ನು ಬಾಯಿಯಲ್ಲಿ ಇಟ್ಟುಕೊಂಡಾಗ ಆಕಸ್ಮಿಕವಾಗಿ ನುಂಗಿ ಗುಂಡು ಸೂಜಿಯು ಬಲ ಶ್ವಾಸಕೋಶದೊಳಗಡೆ ಸೆರಿತ್ತು, ಚಿಕಿತ್ಸೆಗಾಗಿ ಬಾಲಕನನ್ನು ರಿಮ್ಸ್ ಬೋಧಕ ಆಸ್ಪತ್ರೆಗೆ ದಾಖಲಿಸಲಾಯಿತು. ದಾಖಲಾದ ಬಾಲಕನ ಶ್ವಾಸಕೋಶವನ್ನು ಕ್ಷ ಕಿರಣವನ್ನು ಮಾಡಿಸಿದಾಗ ಬಲ ಶ್ವಾಸಕೋಶದಲ್ಲಿ ಸೂಚನಾ ಫಲಕದ ಗುಂಡು ಇರುವುದು ಖಚಿತಪಡಿಸಿಕೊಂಡು, ಬ್ರಾಂಕೋಸ್ಕೋಪ್ ಮೂಲಕ ಗುಂಡು ಸೂಜಿಯನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಶಸ್ತ್ರ ಚಿಕಿತ್ಸೆ ತಂಡದಲ್ಲಿ ಇಎನ್‌ಟಿ ನುರಿತ ತಜ್ಞ ವೈದ್ಯ ಡಾ. ಅರವಿಂದ್ ಸಂಗವಿ, ನುರಿತ ಅರವಳಿಕೆ ತಜ್ಞ ವೈದ್ಯ ಡಾ.ಕಿರಣ ನಾಯಕ, ಡಾಕ್ಟರ್ ಮಲ್ಲಿಕಾರ್ಜುನ್ .ಕೆ ಪಾಟೀಲ್, ಡಾ.ಸಿಂಧು ಪಿಜಿ, ಡಾ.ಇಂದುಮಣಿ, ನರ್ಸಿಂಗ್ ಅಧಿಕಾರಿ ಅಮರೇಶ್ ಸಕ್ರಿ, ಓಟಿ ತಂತ್ರಜ್ಞರಾದ ಲಿಂಗರಾಜ್, ಸುಮನ್ ಕ್ಲ್ಯಾರಿ, ನಾರಾಯಣ, ಶಂಕರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸಂಸ್ಥೆಯ ನಿರ್ದೇಶಕ ಡಾ.ಬಸವರಾಜ ಪೀರಾಪುರ್, ರಿಮ್ಸ್ ಮೆಡಿಕಲ್ ಕಾಲೇಜ ಪ್ರಾಂಶುಪಾಲ ಡಾ.ಬಸವರಾಜ್ ಎಂ ಪಾಟೀಲ್, ವೈದ್ಯಕೀಯ ಅಧೀಕ್ಷಕರು ಡಾ.ಭಾಸ್ಕರ್ ಕೆಂಪೇಗೌಡ, ಇ ಎನ್‌ಟಿ ವಿಭಾಗದ ಮುಖ್ಯಸ್ಥ ಡಾ.ವೆಂಕಟೇಶ್ ಹಾಗೂ ಅರವಳಿಕೆ ಮುಖ್ಯಸ್ಥ ಡಾಕ್ಟರ್ ನಂದನ್ ಪಡಶೆಟ್ಟಿ, ಓಟಿ ಇಂಚಾರ್ಜ್ ಶುಶ್ರುಷಕ ಮೇಲ್ವಿಚಾರಕಿ ಆಶಾ ಹುಂಬಿ ಅತ್ಯುತ್ತಮ ಉಪಕರಣಗಳನ್ನು ಆಸ್ಪತ್ರೆಗೆ ಒದಗಿಸಿ ಶಸ್ತ್ರ ಚಿಕಿತ್ಸೆ ಯಶಸ್ವಿಗೊಳಿಸಿದ್ದಕ್ಕೆ ಇವರಿಗೆಲ್ಲ ರೋಗಿಯ ಕುಟುಂಬಸ್ಥರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ರೋಗಿಯು ಆರಾಮವಾಗಿ ಶಸ್ತ್ರಚಿಕಿತ್ಸೆ ಪಡೆದುಕೊಂಡು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ