LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

*ಮಾಧ್ಯಮ ಮಾಹಿತಿ:*

 

*ಯುವ ಮತದಾರರ ನೋಂದಣಿ ಅಭಿಯಾನ:*

 

ರಾಷ್ಟ್ರದ ಭವಿಷ್ಯ ಯುವಸಮೂಹದ ಕೈಯಲ್ಲಿದ್ದು, ಎಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿ ಪ್ರತಿ ಚುನಾವಣೆಯಲ್ಲಿಯೂ ತಪ್ಪದೆ ಮತ ಚಲಾಯಿಸಬೇಕೆಂದು *ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್* ರವರು ತಿಳಿಸಿದರು.

 

ವಿಜಯ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಯುವ ಮತದಾರರ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವವನ್ನು ಉಳಿಸಲು ನೀವೆಲ್ಲರೂ ನಿಮ್ಮ ಶಕ್ತಿಯನ್ನು ಉಪಯೋಗಿಸಬೇಕು. ಬದಲಾವಣೆ ತರುವ ಶಕ್ತಿ ಯುವ ಸಮೂಹದಲ್ಲಿ ಮಾತ್ರವಿದ್ದು, ಅದನ್ನು ಸರಿಯಾಗಿ ಸದ್ಬಳಕೆ‌ ಮಾಡಲು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.

 

18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಅರ್ಜಿ ಸಲ್ಲಿಸಬಹುದು. ಬೂತ್ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲಿದ್ದಾರೆ. ಜೊತೆಗೆ Voter Help Line App ಮೂಲಕ ಸ್ವಯಂಪ್ರೇರಿತವಾಗಿ ನೋಂದಣಿಯಾಗಬಹುದೆಂದು ತಿಳಿಸಿದರು.

 

ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದು ದೊಡ್ಡ ವಿಷಯವಲ್ಲ, ಸೇರ್ಪಡೆಯಾದ ಬಳಿಕ ಪ್ರತಿ ಚುನಾವಣೆಯಲ್ಲಿ ತಮ್ಮ ಅತ್ಯಮೂಲ್ಯವಾದ ಮತವನ್ನು ತಪ್ಪದೆ ಚಲಾಯಿಸುವುದು ದೊಡ್ಡ ವಿಷಯವೆಂದು ಹೇಳಿದರು.

 

*1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ:*

 

ವಿಜಯ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 4000 ವಿದ್ಯಾರ್ಥಿಗಳಿದ್ದು, 1000ಕ್ಕೂ ಹೆಚ್ಚು ಮಕ್ಕಳನ್ನು ಮತದಾರರ ಪಟ್ಟಿಯಲ್ಲಿ‌ ನೋಂದಣಿ ಮಾಡಿಸಲಾಗುತ್ತಿದೆ ಎಂದು ಶಿಕ್ಷಕರೊಬ್ಬರು ಮಾಹಿತಿ ನೀಡಿದರು.

ಈ ವೇಳೆ ಜಿಲ್ಲಾ ಸ್ವೀಪ್‌ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರಾದ ಕಾಂತರಾಜು, ಸ್ವೀಪ್ ನೋಡಲ್ ಅಧಿಕಾರಿಯಾದ ಪೂರ್ಣಿಮಾ, ಕಾಲೇಜು‌ ಪ್ರಾಂಶುಪಾಲರಾದ ಡಾ. ವೈ ವೆಂಕಟೇಶಪ್ಪ, ಮತದಾರ ನೋಂದಣಿ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ