LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಮೋದ್ ಮಧ್ವರಾಜ್ ಗೆ ಚಿಕ್ಕಮಗಳೂರು-ಉಡುಪಿ ಕ್ಷೇತ್ರದಿಂದ ಎಂಪಿ ಟಿಕೆಟ್ಗೆ ಒತ್ತಾಯ

ಬೆಂಗಳೂರು:  ಗಂಗಾಮತ, ಬೆಸ್ತ, ಮೊಗವೀರ, ಕೊಹ್ಲಿ, ಕಬ್ಬಲಿಗ,ಅಂಬಿಗ ಸಮುದಾಯಕ್ಕೆ ಸೇರಿದ ಪ್ರಮೋದ್ ಮಧ್ವರಾಜ್ ಅವರಿಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಮತಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ಕರ್ನಾಟಕ ರಾಜ್ಯ  ಗಂಗಾಮತಸ್ಥರ ಸಂಘದಿಂದ ಭಾರತೀಯ ಜನತಾ ಪಾರ್ಟಿಗೆ ಮನವಿಯನ್ನು ಮಾಡಿಕೊಂಡರು.

ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಸಂಘದ ಅಧ್ಯಕ್ಷ ಡಾ. ಬಿ ಮೌಲಾಲಿ ಅವರು ಮಾತನಾಡಿ, ರಾಜ್ಯದಲ್ಲಿ ಒಟ್ಟು 60 ಲಕ್ಷಕ್ಕಿಂತ ಅಧಿಕ ಜನಸಂಖ್ಯೆಯನ್ನು ಹೊಂದಿದ್ದು, ಸಮುದಾಯದಲ್ಲಿ ಗುರುತಿಸಿಕೊಂಡು ಮೀನುಗಾರರ ಹಾಗೂ ಹಿಂದುಳಿದ ವರ್ಗಗಳ ಸಮುದಾಯದ ಸರ್ವೋತೋಮುಕ ಅಭಿವೃದ್ಧಿ ಅವಶ್ಯಕವಾಗಿದೆ ಎಂದರು.

ಪ್ರಮುಖವಾಗಿ ಯುವಜನರನ್ನು ಸಂಘಟಿಸುವ ಯುವ ಪೀಳಿಗೆಯಲ್ಲಿ ನಾಯಕತ್ವ ಗುಣಗಳನ್ನು ರೂಪಿಸುವ ಪ್ರಾಮಾಣಿಕತೆ, ಪಾರದರ್ಶಕತೆ, ಬದ್ಧತೆ, ಪರಿಶ್ರಮ ಸಮರ್ಪಣಾ ಮನೋಭಾವದ ಚಿಂತನೆಯುಳ್ಳವರು ಹಾಗೂ ಕ್ರಿಯಾಶೀಲ ವ್ಯಕ್ತಿ ಪ್ರಮೋದ್ ಮುತ್ತುರಾಜ್, ಹೀಗಾಗಿ ಇಂಥ ವ್ಯಕ್ತಿಗೆ ಬಿಜೆಪಿಯಿಂದ ಟಿಕೆಟ್ ನೀಡುವುದೇ ಮನವಿಯನ್ನು ಸಹ ಇದೇ ವೇಳೆ ಮಾಡಿಕೊಂಡರು.

ಪ್ರಮೋದ್ ಅವರು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ರಾಜಕೀಯ ಪ್ರಜ್ಞೆ ಉಳ್ಳವರಾಗಿದ್ದಾರೆ, ಮೀನುಗಾರರ ಸಮಸ್ಯೆಗಳು ಹಿಂದುಳಿದ ವರ್ಗಗಳ ಸಮಸ್ಯೆಗಳನ್ನು ತಿಳಿದುಕೊಂಡು ಪರಿಹರಿಸುವ ರಾಜಕೀಯ ರಂಗದ ಸಮಚಿತ್ತ ಭಾವದ ರಾಜಕಾರಣಿಯಾಗಿದ್ದಾರೆ ಎಂದರು.
ಈಗಾಗಲೇ ಸಂಘದಿಂದ ಬಿಜೆಪಿಯ ರಾಜ್ಯಾಧ್ಯಕ್ಷರಿಗೂ, ರಾಜ್ಯದ ನಾಯಕರಿಗೂ ರಾಷ್ಟ್ರ ನಾಯಕರಿಗೂ ಗಮನಕ್ಕೆ ತಂದು ಮನವಿಯನ್ನು ನೀಡಿ ಒತ್ತಾಯವನ್ನು ಮಾಡಿದ್ದಾರೆ. ಮಧ್ವರಾಜ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಭಿವೃದ್ಧಿಪರ ಚಿಂತನೆ ಹಾಗೂ ರಾಜಕೀಯ ನಿಲುವು ಇಟ್ಟುಕೊಂಡ ವ್ಯಕ್ತಿಯಾಗಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷರಾದ ಮಹಾದೇವ ಕರ್ಜಿಗಿ, ಉಪಾಧ್ಯಕ್ಷರಾದ ಮಣ್ಣೂರು ನಾಗರಾಜ, ಪ್ರಧಾನ ಕಾರ್ಯದರ್ಶಿಯಾದ ಮುರುಳಿಧರ್, ಬಿಜೆಪಿ ಹಿಂದುಳಿದ ವರ್ಗಗಳ ಮುಖಂಡರಾದ ಅವ್ವಣ್ಣ ಮ್ಯಾಕೇರಿ, ಬೆಂಗಳೂರು ಜಿಲ್ಲಾ ಅಧ್ಯಕ್ಷರಾದ ಎಂಪಿ ಮಂಜುನಾಥ್ ಸೇರಿದಂತೆ ಸಂಘದ ಪದಾಧಿಕಾರಿಗಳು ಇದೇ ವೇಳೆ ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ