LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂಗ್ ನಿಧನಕ್ಕೆ  ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಂತಾಪ

ಬೆಂಗಳೂರು : ವಿಶ್ವ ಕಂಡ ಶ್ರೇಷ್ಠ ಆರ್ಥಿಕ ತಜ್ಞ, ಉದಾರ ಆರ್ಥಿಕ ನೀತಿಯ ಹರಿಕಾರ ಹಾಗೂ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ನಿಧನಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಶೋಕ ಸಂದೇಶದಲ್ಲಿ ಅವರು, ದೇಶದ ಪ್ರಧಾನಿಯಾಗಿ 2004ರಿಂದ 2014ರವರೆಗೆ ದೇಶವನ್ನು ಮುನ್ನಡೆಸಿದ್ದ ಮನಮೋಹನ್ ಸಿಂಗ್, ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಹಾಗೂ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ನಂತರ ಅತಿಹೆಚ್ಚು ಅವಧಿಗೆ ಪ್ರಧಾನಿಯಾಗಿ ಕೆಲಸ ನಿರ್ವಹಿಸಿದ ಹಿರಿಮೆ ಹೊಂದಿದ್ದರು,

ಹಣದುಬ್ಬರ ನಿಯಂತ್ರಣಕ್ಕೆ ಸಾಕಷ್ಟು ಶ್ರಮಿಸಿದ್ದ ಮನಮೋಹನ್ ಸಿಂಗ್, ಆಹಾರ ಹಕ್ಕು ಕಾಯ್ದೆ, ಆರ್ ಟಿ ಐ ಕಾಯ್ದೆ, ಸರ್ವ ಶಿಕ್ಷಣ ಅಭಿಯಾನ, ಮನ್ರೇಗಾ ಯೋಜನೆ, ಕಡ್ಡಾಯ ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿದ್ದು ಸೇರಿದಂತೆ ಹಲವು ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೊಳಿಸಿ ದೇಶದ ಸವಾರ್ಂಗೀಣ ಅಭ್ಯುದಯಕ್ಕೆ ಶ್ರಮಿಸಿದ್ದ ಶ್ರೇಷ್ಠ ರಾಜನೀತಿಜ್ಞ ಎಂದು ಹೊರಟ್ಟಿ ಬಣ್ಣಿಸಿದ್ದಾರೆ.

ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿ, ಮಿತಭಾಷಿಯಾಗಿದ್ದ ಡಾ.ಮನಮೋಹನ್ ಸಿಂಗ್, ಹಲವಾರು ಸಂದರ್ಭದಲ್ಲಿ ದೇಶದಲ್ಲಿ ಎದುರಾಗಿದ್ದ ಆರ್ಥಿಕ ಸಂಕಷ್ಟಗಳಿಗೆ ಸೂಕ್ತ ಪರಿಹಾರ ಕಂಡುಹಿಡಿದ ನವಭಾರತದ ನಿರ್ಮಾತೃ ಎಂದರೇ ಅತಿಶಯೋಕ್ತಿಯಾಗಲಾರದು ಎಂದಿರುವ ಬಸವರಾಜ ಹೊರಟ್ಟಿ, ಡಾ.ಸಿಂಗ್ ಅವರ ನಿಧನದಿಂದ ಭಾರತ ಶ್ರೇಷ್ಠ ಆರ್ಥಿಕ ತಜ್ಞನನ್ನು ಕಳೆದುಕೊಂಡು ಬಡವಾಗಿದೆ, ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಹಾಗೂ ಅವರ ಅಪಾರ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಬಸವರಾಜ ಹೊರಟ್ಟಿ ಪ್ರಾರ್ಥಿಸಿದ್ದಾರೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!