LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆಯಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ

ಬೆಂಗಳೂರು: ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ಇವರ ವ್ಯಾಪ್ತಿಯಲ್ಲಿ ಬರುವ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ನಾಳೆಯಿಂದ(ದಿನಾಂಕ: 13-04-2024) ಅಂಚೆ ಮತದಾನ ನಡೆಯಲಿದೆ.

ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ರವರ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ದಕ್ಷಿಣ ಸೇರಿದಂತೆ 3 ಲೋಕಸಭಾ ಕ್ಷೇತ್ರಗಳಲ್ಲಿ ಬರುವ ಮತದಾರರ ಪಟ್ಟಿಯಲ್ಲಿರುವ 85 ವರ್ಷಕ್ಕಿಂತ ಮೇಲ್ಪಟ್ಟ(AVSC) ಹಾಗೂ ವಿಶೇಷ ಚೇತನರು(ಶೇ.40ಕ್ಕಿಂತ ಹೆಚ್ಚು ಅಂಗವಿಲತೆ ಉಳ್ಳವರು[ಮತದಾರರ ಪಟ್ಟಿಯಲ್ಲಿ ಗುರುತಿಸಿರುವ]-PWD) ಅಂಚೆ ಮತದಾನದ ಮೂಲಕ ಅವಕಾಶ ಕಲ್ಪಿಸಲಾಗಿದೆ.

ನಗರದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 95,128 85 ವರ್ಷ ಮೇಲ್ಪಟ್ಟ ಹಾಗೂ 22,222 ವಿಶೇಷ ಚೇತನರನ್ನು ಗುರುತಿಸಲಾಗಿದೆ. ಈ ಪೈಕಿ 85 ವರ್ಷ ಮೇಲ್ಪಟ್ಟ 6206 ಮತದಾರರು ಹಾಗೂ ವಿಶೇಷ ಚೇತನರು 201 ಮತದಾರರು ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.

85 ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದವರು ಹಾಗೂ ವಿಶೇಷ ಚೇತನರಿಗೆ ಏಪ್ರಿಲ್ 13 ರಿಂದ ಏಪ್ರಿಲ್ 18 ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮತದಾರರ ಮನೆಗೆ ಇಬ್ಬರು ಮತಗಟ್ಟೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವೀಡಿಯೋಗ್ರಾಫರ್ ಒಳಗೊಂಡಿರುವ ಮತಗಟ್ಟೆ ತಂಡವು ಮನೆಗೆ ತೆರಳಿ ಮತದಾನ ಗುರುತಿನ ಚೀಟಿ ಪರಿಶೀಲಿಸಲಾಗುತ್ತದೆ. ಬಳಿಕ ಗೌಪ್ಯ ಮತದಾನಕ್ಕಾಗಿ ಅಂಚೆ ಮತಪತ್ರದಲ್ಲಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗುತ್ತದೆ. ಈ ಎಲ್ಲಾ ಪ್ರಕ್ರಿಯೆಯನ್ನು ವೀಡಿಯೋಗ್ರಫಿ ಮೂಲಕ ಸೆರೆಯಿಡಿಯಲಾಗುತ್ತದೆ.

ಮತಗಟ್ಟೆ ಸಿಬ್ಬಂದಿಯು ಮತಪತ್ರ ಹಾಗೂ ಮತಪೆಟ್ಟಿಗೆಗಳೊಂದಿಗೆ ಪ್ರತೀ ಮತದಾರರ ಮನೆಗೆ ಎರಡು ಬಾರಿ ಭೇಟಿ ನೀಡುತ್ತಾರೆ. ಮುಂಚಿತವಾಗಿ ಮಾಹಿತಿ ನೀಡಿದ ಬಳಿಕವೇ ಮತಗಟ್ಟೆ ಸಿಬ್ಬಂದಿ ಭೇಟಿನೀಡುವರು. ಮೊದಲ ಬಾರಿ ಮತದಾರರು ಮನೆಯಲ್ಲಿರದಿದ್ದರೆ, ಎರಡನೇ ಬಾರಿ ಹೋಗುತ್ತಾರೆ. ಆ ಬಳಿಕ ಮತದಾನಕ್ಕೆ ಅವಕಾಶವಿರುವುದಿಲ್ಲ.

ಮನೆಯಿಂದ ಮತದಾನಕ್ಕೆ 12ಡಿ ನಮೂನೆಯಲ್ಲಿ ನೋಂದಣಿ ಮಾಡಿಸಿಕೊಂಡಿರುವವರಿಗೆ ಮತಗಟ್ಟೆಗೆ ಬಂದು ವಿದ್ಯುನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸುವ ಅವಕಾಶವಿರುವುದಿಲ್ಲ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ