LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಐತಿಹಾಸಿಕ ಕೆಂಪಾಂಬುಧಿ ಕೆರೆ ಅಭಿವೃದ್ಧಿಗೆ ಡಿಪಿಆರ್ ತಯಾರಿಸಿ: ಡಾ: ರಾಜೇಂದ್ರ ಕೆ. ವಿ

ಬೆಂಗಳೂರು : ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ. ರವರು ಹಾಗೂ ಬಸವನಗುಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ *ರವಿ ಸುಬ್ರಹ್ಮಣ್ಯ* ರವರು ಇಂದು ಬಸವನಗುಡಿ ವಿಭಾಗದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.news_1781186779_0_201.webp

ವೈಟ್ ಟಾಪಿಂಗ್ ಸೇರಿದಂತೆ ರಸ್ತೆ ಕಾಮಗಾರಿ ಪರಿವೀಕ್ಷಿಸಿದರಲ್ಲದೆ, ಉದ್ಯಾನ, ಕೆರೆ ಅಭಿವೃದ್ಧಿ ಕುರಿತಂತೆ ನಿರ್ದೇಶನಗಳನ್ನು ನೀಡಿದರು. ಹಕ್ಕುಪತ್ರ ಸಂಬಂಧಿತ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಸಂಬಂಧಿತ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ಸೂಚಿಸಿದರು.

*ಕೆಂಪಾಂಬುಧಿ ಕೆರೆ:*
ಐತಿಹಾಸಿಕ ಕೆಂಪಾಂಬುಧಿ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಆಗಬೇಕಾದ ಕೆಲಸಗಳ ಬಗ್ಗೆ ವಿಶೇಷ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಲ್ಲಿಸಿ ಬೇಗ ಕೆಲಸ ಆರಂಭಿಸಲು ಸೂಚಿಸಿದರು.

*ಸಿಎಂಐಡಿಪಿ ರಸ್ತೆ:*
ಹನುಮಂತನಗರದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ (ಸಿಎಂಐಡಿಪಿ) ರಸ್ತೆ (50 ಫೀಟ್‌ ರೋಡ್) ಕಾಮಗಾರಿಗೆ ಚಾಲನೆ ನೀಡಿದರು. ಮಳೆಗಾಲ ಆರಂಭವಾಗಿದ್ದು, ಶೀಘ್ರವಾಗಿ ಕೆಲಸ ಆರಂಭಿಸಿ ನಿಗದಿತ ಸಮಯದೊಳಗೆ ಕಾಮಗಾರಿ ಮುಗಿಸುವಂತೆ ತಿಳಿಸಿದರು.news_1781186779_1_323.webp

*ವೈಟ್ ಟಾಪಿಂಗ್:*
ಬ್ಯಾಂಕ್‌ ಕಾಲೊನಿ ಮುಖ್ಯ ರಸ್ತೆಯಲ್ಲಿ ವೈಟ್ ಟಾಪಿಂಗ್ ಕೆಲಸಗಳನ್ನು ಶೀಘ್ರವಾಗಿ ಆರಂಭಿಸಿ. ಪಾದಚಾರಿ ಮಾರ್ಗಗಳು ವ್ಯವಸ್ಥಿತವಾಗಿ ಇರುವಂತೆ, ಮಳೆನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

*ಹಕ್ಕುಪತ್ರ ಸಮಸ್ಯೆ:*
ಈ ಸಂದರ್ಭದಲ್ಲಿ ಕೆಲವು ನಾಗರಿಕರು ಹಕ್ಕುಪತ್ರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಹವಾಲು ಸಲ್ಲಿಸಿದಾಗ, ಕಾನೂನು ಪರಿಧಿಯೊಳಗೆ ಅಗತ್ಯ ಕ್ರಮ ಕೈಗೊಂಡು ಸಂತ್ರಸ್ತರಿಗೆ ನೆರವಾಗುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಅಭಿಯಂತರರು ಬಸವರಾಜ್ ಕಬಾಡೆ, ಅಧೀಕ್ಷಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು, ಕಂದಾಯ ಹಾಗೂ ಆರೋಗ್ಯ ವಿಭಾಗದ ಅಧಿಕಾರಿಗಳು ಹಾಜರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಮುದಾಯ ನಾಯಿಗಳ ಸಂಖ್ಯೆಯನ್ನು ಆಧರಿಸಿ ಹೆಚ್ಚುವರಿ ಆಹಾರ ತಾಣಗಳ ಗುರುತು: ಮಹೇಶ್ವರ್ ರಾವ್ಐತಿಹಾಸಿಕ ಕೆಂಪಾಂಬುಧಿ ಕೆರೆ ಅಭಿವೃದ್ಧಿಗೆ ಡಿಪಿಆರ್ ತಯಾರಿಸಿ: ಡಾ: ರಾಜೇಂದ್ರ ಕೆ. ವಿ ಪಾಲಿಕೆಯ ಪಿಯು ಕಾಲೇಜಿನ ಮೂಲಸೌಕರ್ಯ ಅಭಿವೃದ್ಧಿಯಾಗಬೇಕು: ರಮೇಶ್ಜಿಬಿಎ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳಿಗೆ ಜಿಐಎಸ್ ಮ್ಯಾಪಿಂಗ್ ಮೂಲಕ ಏಕೀಕರಣಗೊಳಿಸಿ: ಮಹೇಶ್ವರ್ ರಾವ್ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರಕ್ಕೆ ಎಂ ಬಿ ಪಾಟೀಲ ಪತ್ರ80ರ ದಶಕದ ಸೈದ್ದಾಂತಿಕ ಹೋರಾಟ, ಚಳವಳಿಗೆ ಕವಿ ಡಾ. ಸಿದ್ದಲಿಂಗಯ್ಯ ಸಾಕ್ಷಿ: ಮಾವಳ್ಳಿ ಶಂಕರ್ಕುಮಾರ ಕೃಪ ಕಟ್ಟಡವನ್ನು ಸ್ವಾರ್ಥಕ್ಕಾಗಿ ಸಿಎಂ‍ DK ಮಾರ್ಪಾಡು ಮಾಡುವುದು ಖಂಡನಿಯ: HDK    ‘TCS’ ಮತ್ತು ‘SBI’ ನಂತರ ‘ವಿಪ್ರೋ’ದಲ್ಲೂ ‘ಕಾರ್ಪೊರೇಟ್ ಜಿಹಾದ್ ಪ್ರೊ. ಕೆ. ಎಸ್. ಭಗವಾನ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ : HJSಆಳಂದ ಶಿವಲಿಂಗ ಅಪವಿತ್ರಗೊಳಿಸಿದ ಗಲಭೆಕೋರರು: ಕೇಸ್ ವಾಪಸ್ ಆದೇಶ ತಕ್ಷಣ ರದ್ದುಗೊಳಿಸಲು ಆಗ್ರಹ