LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಖಾಸಗಿ ಮ್ಯಾನ್‌ಹೋಲ್ ಮತ್ತು ಎಸ್‌ಟಿಪಿ (STP) ಸ್ವಚ್ಛಗೊಳಿಸುವ ಏಜೆನ್ಸಿಗಳ ನೋಂದಣಿ ಕಡ್ಡಾಯ

ಬೆಂಗಳೂರು: ನಗರದಲ್ಲಿ ಖಾಸಗಿ ಮ್ಯಾನ್‌ಹೋಲ್ ಮತ್ತು ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು (STP) ಸ್ವಚ್ಛಗೊಳಿಸುವ ಎಲ್ಲ ಖಾಸಗಿ ಏಜೆನ್ಸಿಗಳು ಮತ್ತು ವಾಹನಗಳ ನೋಂದಣಿಯನ್ನು ಬೆಂಗಳೂರು ಜಲಮಂಡಳಿ (BWSSB) ಕಡ್ಡಾಯಗೊಳಿಸಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾಯ್ದೆ 1964ರ ಸೆಕ್ಷನ್ 84 ಮತ್ತು 88ರ ಅಡಿಯಲ್ಲಿ ಈ ಹಿಂದೆ ನೀಡಲಾಗಿದ್ದ ಅಧಿಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಲಮಂಡಳಿ ಅಧ್ಯಕ್ಷರು ಎಲ್ಲಾ ಕಾರ್ಯಪಾಲಕ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

*ಪ್ರಮುಖ ಸೂಚನೆಗಳು:*
*ಮಾರ್ಚ್ 7 ರ ಒಳಗೆ ಕಡ್ಡಾಯ ನೋಂದಣಿ*: ಖಾಸಗಿ ಒಳಚರಂಡಿ ವ್ಯವಸ್ಥೆಯ ಮ್ಯಾನ್‌ಹೋಲ್ ಮತ್ತು ಎಸ್‌ಟಿಪಿ ಘಟಕಗಳನ್ನು ಸ್ವಚ್ಛಗೊಳಿಸುವ ವಾಹನಗಳ ಮಾಲೀಕರು ಮತ್ತು ಏಜೆನ್ಸಿಗಳನ್ನು ಗುರುತಿಸಿ, 07.03.2026 ರೊಳಗೆ ಕಡ್ಡಾಯವಾಗಿ ವಿಭಾಗ ಮಟ್ಟದಲ್ಲಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ.


*ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ:*

ವಾಣಿಜ್ಯ ಕಟ್ಟಡಗಳು, ವಸತಿ ಸಮುಚ್ಚಯಗಳು, ಗ್ರೂಪ್ ಹೌಸ್ ಮತ್ತು ಖಾಸಗಿ ಬಡಾವಣೆಗಳಲ್ಲಿರುವ ಎಸ್‌ಟಿಪಿ ಮತ್ತು ಮ್ಯಾನ್‌ಹೋಲ್‌ಗಳ ನಿರ್ವಹಣೆಯನ್ನು ಕಡ್ಡಾಯವಾಗಿ ಜಲಮಂಡಳಿಯಲ್ಲಿ ನೋಂದಾಯಿತವಾಗಿರುವ ಏಜೆನ್ಸಿಗಳ ಮುಖಾಂತರವೇ ಮಾಡಿಸಬೇಕು ಎಂದು ಸೂಚಿಸಲಾಗಿದೆ.

*ಅನಾಹುತಗಳಿಗೆ ಮಾಲೀಕರೇ ಹೊಣೆ:* ನೋಂದಾಯಿಸಲ್ಪಡದ ಅಥವಾ ಅನಧಿಕೃತ ವ್ಯಕ್ತಿಗಳ ಮೂಲಕ ಸ್ವಚ್ಛತಾ ಕಾರ್ಯ ಕೈಗೊಂಡಾಗ ಯಾವುದಾದರೂ ಅನಾಹುತ ಸಂಭವಿಸಿದಲ್ಲಿ, ಆಯಾ ವಾಣಿಜ್ಯ ಕಟ್ಟಡ / ವಸತಿ ಸಮುಚ್ಚಯ / ಖಾಸಗಿ ಬಡಾವಣೆಗಳ ಮಾಲೀಕರು ಅಥವಾ ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್ (RWA) ರವರೇ ನೇರ ಜವಾಬ್ದಾರರಾಗುತ್ತಾರೆ ಎಂದು ಎಚ್ಚರಿಸಲಾಗಿದೆ.

ಈ ನಿಯಮಾವಳಿಗಳ ಕುರಿತು ಎಲ್ಲ ವಾಣಿಜ್ಯ ಕಟ್ಟಡಗಳು ಮತ್ತು ವಸತಿ ಸಮುಚ್ಚಯಗಳ ಮಾಲೀಕರು ಹಾಗೂ ಅಸೋಸಿಯೇಷನ್‌ಗಳಿಗೆ ಕೂಡಲೇ ಸೂಚನಾ ಪತ್ರವನ್ನು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ