
ದಾವಣಗೆರೆ : ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಜಯಗಳಿಸಿದ ಶಾಸಕ ಸಮರ್ಥ್ ಶಾಮನೂರು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿ ಆಶೀರ್ವಾದ ಪಡೆದರು.
ಬೆನ್ನಿನಗರಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಲಿಯಾಗಿದ್ದ ಕ್ಷೇತ್ರಕ್ಕೆ ಉಪಚುನಾವಣೆ ನಡೆದು ಫಲಿತಾಂಶ ಹೊರಬಿದ್ದಿದ್ದು ಅದರಲ್ಲಿ ದಿವಂಗತ ಶಾಮನೂರು ಶಿವರ ಶಂಕರಪ್ಪ ಅವರ ಮೊಮ್ಮಗ ಸಮರ್ಥ ಅವರು ಅಮೋಘವಾಗಿ ಗೆದ್ದು ಬೀಗಿದರು.
ಗೆದ್ದ ನಂತರ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಗೃಹ ಕಚೇರಿ ಕೃಷ್ಣ ದಲ್ಲಿ ಭೇಟಿ ಮಾಡ ಪುಷ್ಪಗುಚ್ಛ ನೀಡಿ ಆಶೀರ್ವಾದ ಪಡೆದರು.
ಸಮರ್ಥ ಬೇಟಿಯ ಸಂದರ್ಭದಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರು ಉಪಸ್ಥಿತರಿದ್ದರು.