LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉತ್ತರ ನಗರ ಪಾಲಿಕೆಯಲ್ಲಿ ರಾಜ್ಯ ಹಣಕಾಸು ಆಯೋಗದ ಸಮಾಲೋಚನಾ ಸಭೆ

ಬೆಂಗಳೂರು : ಬೆಸ್ಕಾಂ ನಿಂದ ಸಮಯಕ್ಕೆ ಸರಿಯಾಗಿ ಪ್ರತಿ ತಿಂಗಳು ವಿದ್ಯುತ್ ಬಿಲ್ ಗಳನ್ನು ನಗರ ಪಾಲಿಕೆಗೆ ಕಡ್ಡಾಯವಾಗಿ ನೀಡಿ, ಬಾಕಿ ಬಿಲ್ ಗಳ ಮೇಲೆ ಬಡ್ಡಿ ದರಗಳನ್ನು ವಿಧಿಸದಂತೆ ಕ್ರಮ ವಹಿಸಲು ಬೆಸ್ಕಾಂ ಅಧಿಕಾರಿಗಳಿಗೆ ರಾಜ್ಯ ಹಣಕಾಸು ಆಯೋಗದ ಗೌರವಾನ್ವಿತ ಅಧ್ಯಕ್ಷರಾದ ಡಾ.ಸಿ.ನಾರಾಯಣಸ್ವಾಮಿ ರವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಬ್ಯಾಟರಾಯನಪುರದ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ  5ನೇ ರಾಜ್ಯ ಹಣಕಾಸು ಆಯೋಗದ ಸಮಾಲೋಚನಾ ಸಭೆಯ* ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೀದಿ ದೀಪಗಳು, ಉದ್ಯಾನವನ, ಗ್ರಂಥಾಲಯಗಳು, ಸಭಾಂಗಣಗಳು, ಶಾಲೆಗಳು ಹಾಗೂ ಪಾಲಿಕೆಗೆ ಸಂಬಂಧಿಸಿದ ಇತರ ಸ್ಥಳಗಳಲ್ಲಿನ ವಿದ್ಯುತ್ ಪೂರೈಕೆಯ ಬಿಲ್ ಗಳನ್ನು ಪಾಲಿಕೆಗೆ ತ್ರೈಮಾಸಿಕವಾಗಿ ಸಲ್ಲಿಸುತ್ತಿರುವುದರಿಂದ ಬಿಲ್ ಗಳ ಮೇಲಿನ ಬಡ್ಡಿದರ ಪಾಲಿಕೆಗಳಿಗೆ ಹೊರೆಯಾಗುತ್ತಿರುವುದು ಗಮನಕ್ಕೆ ಬರಲಾಗಿ, ಬೆಸ್ಕಾಂ ವತಿಯಿಂದ ಪ್ರತಿ ತಿಂಗಳು ವಿದ್ಯುತ್ ಬಿಲ್ ಗಳನ್ನು ನಗರ ಪಾಲಿಕೆಗೆ ಸಲ್ಲಿಸಿ, ಸಮನ್ವಯದೊಂದಿಗೆ ಬಡ್ಡಿ ದರಗಳನ್ನು ನಿಯಂತ್ರಿಸಲು ಕ್ರಮ ವಹಿಸುವಂತೆ ತಿಳಿಸಿದರು.

*ಫೋನ್ ಇನ್‌ ಕಾರ್ಯಕ್ರಮದ ಕುರಿತು ಶ್ಲಾಘನೆ:*

ನಗರ ಪಾಲಿಕೆ ವ್ಯಾಪ್ತಿಯ ಏರ್ಪೋರ್ಟ್ ರಸ್ತೆಯಲ್ಲಿ ರಾತ್ರಿಯಿಡೀ ಕೈಗೊಳ್ಳಲಾಗುತ್ತಿರುವ ಸ್ವಚ್ಛತೆ, 30 ಕಿಮೀ ಪೂರ್ಣಗೊಂಡಿರುವ ಫುಟ್ ಪಾತ್ ವಾಕ್, ಮೆಗಾ ಸಾಮೂಹಿಕ ಸ್ವಚ್ಛತಾ ಕಾರ್ಯ ಕೈಗೊಂಡು ಒಂದೇ ದಿನದಲ್ಲಿ 599 ಟನ್ ತ್ಯಾಜ್ಯ ತೆರವುಗೊಳಿಸಿದ ಅಧಿಕಾರಿಗಳನ್ನು ಉತ್ತೇಜಿಸುವ ಸಲುವಾಗಿ ಬಹುಮಾನ ವಿತರಣಾ ಕಾರ್ಯಕ್ರಮದ ಕುರಿತು ಸಭೆಯಲ್ಲಿ ಪ್ರಶಂಸೆ ವ್ಯಕ್ತಪಡಿಸಿದರು. 5 ನಗರ ಪಾಲಿಕೆಗಳ ಪೈಕಿ ಉತ್ತರ ನಗರ ಪಾಲಿಕೆಯಲ್ಲಿ ಪ್ರಪ್ರಥಮವಾಗಿ ಫೋನ್ ಇನ್ ಕಾರ್ಯಕ್ರಮ ಪ್ರಾರಂಭಿಸಲಾಗಿ, ಈ ಕಾರ್ಯಕ್ರಮ ನಿರಂತರವಾಗಿ ಒಟ್ಟು 15 ವಾರ ನಡೆದ್ದಿದ್ದು, 831 ಆಹವಾಲುಗಳನ್ನು ಸ್ವೀಕರಿಸಿ ಬಹುತೇಕ ಶೇಕಡಾ 70 ರಷ್ಟು ಇತ್ಯರ್ಥ ಪಡಿಸಿರುವುದು ಉತ್ತಮ ಕೆಲಸವಾಗಿದೆ. ಇತರೆ ಅಭಿವೃದ್ಧಿ ಕಾರ್ಯಗಳು ಸಹ ಉತ್ತಮ ರೀತಿಯಲ್ಲಿ ನಡೆಯುತ್ತಿವೆ ಎಂದು ಅಧ್ಯಕ್ಷರು ಶ್ಲಾಘನೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ *ಆಯುಕ್ತರಾದ ಶ್ರೀ ಪೊಮ್ಮಲ ಸುನಿಲ್ ಕುಮಾರ್* ಹಾಗೂ *ಅಭಿವೃದ್ಧಿ ಅಪರ ಆಯುಕ್ತರಾದ ಶ್ರೀಮತಿ ಲತಾ* ರವರು ಮಾತನಾಡಿ, ಮುಂದಿನ ಹಣಕಾಸು ವರ್ಷದಲ್ಲಿ ಉದ್ಯಾನವನಗಳು ಹಾಗೂ ಕೆರೆಗಳ ಸುತ್ತ ಮುತ್ತ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸುವ ಅವಶ್ಯಕತೆ ಇದ್ದು, ಇದಕ್ಕೆ ಸುಮಾರು 75 ಕೋಟಿ ರೂಪಾಯಿಗಳು ಬೇಕಾಗಿದೆ. ಹೊಸದಾಗಿ ಬೃಹತ್ ಮಳೆ ನೀರು ಕಾಲುವೆಗಳ ನಿರ್ಮಾಣ ಹಾಗೂ ದುರಸ್ಥಿ ಕಾರ್ಯಕ್ಕೆ 500 ಕೋಟಿ ರೂಪಾಯಿಗಳ ಅವಶ್ಯಕತೆ ಇದೆ. ಹೊಸ ರಸ್ತೆಗಳ ನಿರ್ಮಾಣ, ಅಗಲೀಕರಣ ಮತ್ತು ದುರಸ್ಥಿ ಸಂಬಂಧಿತ ಕಾರ್ಯಕ್ಕೆ 500 ಕೋಟಿ ರೂಪಾಯಿಗಳ ಅಗತ್ಯವಿದೆ. ಉಳಿದಂತೆ ಘನ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದ ಅನ್ವಯ ಬೀದಿ ನಾಯಿಗಳ ಸ್ಥಳಾಂತರ, ಲಸಿಕೆ ಮತ್ತು ಅವುಗಳಿಗೆ ಸೂಕ್ತ ಆಶ್ರಯ ತಾಣ ಕಲ್ಪಿಸಲು 25 ಕೋಟಿಗಳ ರೂಪಾಯಿಗಳನ್ನು ಮೀಸಲಿಡಬೇಕಿದೆ. ಈ ಎಲ್ಲಾ ಕಾರ್ಯಗಳಿಗೆ ಸೂಕ್ತ ಅನುದಾನವನ್ನು ಹಣಕಾಸು ಆಯೋಗ ಒದಗಿಸಬೇಕು ಎಂದು ವಿನಂತಿಸಿದರು.

ಇಂದಿರಾ ಕ್ಯಾಂಟೀನ್ ಗಳ ಅಭಿವೃದ್ಧಿ ಮತ್ತು ನಿರ್ವಹಣೆಗೆ 10 ಕೋಟಿ ರೂಪಾಯಿಗಳ ಅವಶ್ಯಕತೆ ಇದೆ. ಬಿಬಿಎಂಪಿಯನ್ನು 5 ನಗರ ಪಾಲಿಕೆಗಳಾಗಿ ವಿಂಗಡಿಸಲಾಗಿದ್ದು, ಇದರಲ್ಲಿ ಮುಖ್ಯವಾಗಿ ನಮ್ಮ ಉತ್ತರ ನಗರ ಪಾಲಿಕೆ ಮುಖ್ಯ ಕಚೇರಿ ತೀವ್ರ ಸ್ಥಳಾವಕಾಶದ ಕೊರತೆಯನ್ನು ಎದುರಿಸುತ್ತಿದೆ. ಇನ್ನು ಇತರ ವಲಯ ಕಚೇರಿಗಳು ಸಹ ಇಕ್ಕಟ್ಟಿನ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಚುನಾವಣೆಗಳು ಸಹ ಇನ್ನೇನು ಘೋಷಣೆಯಾಗಲಿದ್ದು, ಕೌನ್ಸಿಲ್ ಸಭೆ ನಡೆಸಲು ಸಹ ಸೂಕ್ತ ವ್ಯವಸ್ಥೆ ಇಲ್ಲದಾಗಿದೆ. ಈ ಎಲ್ಲಾ ಕಾರ್ಯಗಳಿಗೆ ಒಟ್ಟಾರೆಯಾಗಿ ಸುಮಾರು 100 ಕೋಟಿಗಳ ಖರ್ಚು ವೆಚ್ಚವನ್ನು ಅಂದಾಜಿಸಲಾಗಿದ್ದು, ಈ ಸಂಬಂಧ ಹಣಕಾಸು ಆಯೋಗ ಸೂಕ್ತ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಪಾಲಿಕೆ ವತಿಯಿಂದ ಕೋರಿದರು.

*ಸ್ಥಳೀಯ ಆಡಳಿತ ಆರ್ಥಿಕ ಸ್ಥಿತಿಗಳ ಕುರಿತು ಚರ್ಚೆ:*

ಸಭೆಯಲ್ಲಿ ಸಂಪನ್ಮೂಲ ಕ್ರೂಢೀಕರಣ ಮತ್ತು ಬಳಕೆ ಹಾಗೂ ಸ್ಥಳೀಯ ಆಡಳಿತ ಆರ್ಥಿಕ ಸ್ಥಿತಿಗಳ ಕುರಿತು ಚರ್ಚೆ ನಡೆಯಿತು. ನಗರ ಪಾಲಿಕೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಹಾಗೂ ಅನುದಾನದ ಅವಶ್ಯಕತೆಯ ಕುರಿತು ಸಮಾಲೋಚನೆ ನಡೆಸಲಾಯಿತು. ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕಲ್ಯಾಣ ಕಾರ್ಯಕ್ರಮಗಳು, ಸ್ಲಂ ಗಳ ಅಭಿವೃದ್ಧಿ, ಘನ ತ್ಯಾಜ್ಯ ನಿರ್ವಹಣೆ, ಪರಿಸರ ಸಂರಕ್ಷಣೆ, ರಸ್ತೆಗಳ ದುರಸ್ಥಿ ಮತ್ತು ಅಗಲೀಕರಣ, ಬೀದಿ ದೀಪಗಳ ನಿರ್ವಹಣೆ, ಸೋಲಾರ್ ದೀಪಗಳ ಅಳವಡಿಕೆ, ಸಂಪನ್ಮೂಲ ಕ್ರೋಢೀಕರಣ, ಸೇರಿದಂತೆ ಹಲವು ವಿಷಯಗಳ ಕುರಿತು ಪ್ರಗತಿವ ಪರಿಶೀಲನೆಯನ್ನು ಕೂಡ ಕೈಗೊಳ್ಳಲಾಯಿತು.

ಸಭೆಯಲ್ಲಿ ಜಂಟಿ ಆಯುಕ್ತರಾದ ಶ್ರೀಮತಿ ಪಲ್ಲವಿ, ರಾಜ್ಯ ಹಣಕಾಸು ಆಯೋಗದ ಸದಸ್ಯರಾದ ಶ್ರೀ ಮೊಹಮ್ಮದ್ ಸನಾ ಉಲ್ಲಾ (ನಿವೃತ್ತ ಭಾ.ಆ.ಸೇ), ನಿವೃತ್ತ ನಿಯಂತ್ರಕರಾದ ಶ್ರೀ ಆರ್.ಎಸ್. ಪೋಂಡೆ, ರಾಜ್ಯ ಲೆಕ್ಕಪತ್ರ ಇಲಾಖೆ, ಸಮಾಲೋಚಕರಾದ ಸ್ಮಿತಾ ಎಸ್. ಬಿರಾದರ್ ಸೇರಿದಂತೆ ಬೆಸ್ಕಾಂ, ಜಲ ಮಂಡಳಿ, ಸ್ಲಂ ಬೋರ್ಡ್, ನಗರ ಪಾಲಿಕೆಯ ಎಲ್ಲಾ ಇಲಾಖೆಯ ಮುಖ್ಯಸ್ಥರು ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ