LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಪಾಲರ ಘನತೆಯನ್ನ ಕಾಂಗ್ರೆಸ್‌ನವರು ಹಾಳು ಮಾಡಲು ಹೊರಟಿದ್ದಾರೆ

ರಾಮನಗರ: ರಾಜ್ಯಪಾಲರ ಘನತೆಗೆ ಕಾಂಗ್ರೆಸ್ ಅಗೌರವ ತೋರಿದೆ, ರಾಜ್ಯಪಾಲರ ಸ್ಥಾನಕ್ಕೆ ಒಂದು ಗೌರವ ಇದೆ. ಅವರು ಏನನ್ನ ಓದಬೇಕು ಎನ್ನುವುದು ಅವರಿಗೆ ಬಿಟ್ಟ ವಿಚಾರ. ಅವರ ಘನತೆಯನ್ನ ಕಾಂಗ್ರೆಸ್‌ನವರು ಹಾಳು ಮಾಡಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ರಾಮನಗರದಲ್ಲಿ ಜನ್ಮದಿನದ ಹಿನ್ನಲೆಯಲ್ಲಿ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆದ ನಂತರ ನಿಖಿಲ್ ಕುಮಾರಸ್ವಾಮಿ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ರಾಜ್ಯಪಾಲರನ್ನ ಕಾಂಗ್ರೆಸ್ ಶಾಸಕರು ಅಡ್ಡಗಟ್ಟಿ ಧಿಕ್ಕಾರ ಕೂಗಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,ರಾಜ್ಯ ಸರ್ಕಾರ ಸದಾಕಾಲ ಕೇಂದ್ರದ ಜೊತೆ ಸಂಘರ್ಷ ಸರಿಯಲ್ಲ
ಇದರಿಂದ ಹೋದ್ರೆ ರಾಜ್ಯದ ಜನತೆಯೇ ಬಡವಾಗುತ್ತಾರೆ.
ಎಂದು ನಿಖಿಲ್ ಅವರು ಕಿಡಿಕಾರಿದರು.

ಇನ್ನು ತುಮಕೂರಿನಲ್ಲಿ ಸ್ಟೇಡಿಯಂ ಹೆಸರು ಬದಲಾವಣೆ ಆಯ್ತು. ಮಹಾತ್ಮ ಗಾಂಧಿ ಹೆಸರು ಬದಲಾವಣೆ ಮಾಡಿರೋದು ನಿಮ್ಮ ನಾಯಕರೇ. ಅದರ ಬಗ್ಗೆ ಯಾಕೆ ಮಾತನಾಡುವುದಿಲ್ಲ. ಕಾಂಗ್ರೆಸ್‌ನವರು ಯಾಕೆ ಈ ವಿಚಾರದಲ್ಲಿ ಡಬಲ್ ಸ್ಟ್ಯಾಂಡ್ ತೆಗೆದುಕೊಂಡಿದ್ದೀರಿ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಮುಂದಿನ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿ ವಿಚಾರಕ್ಕೆ ಮಾತನಾಡಿದ ಅವರು. ಸ್ವಾಭಾವಿಕವಾಗಿ ಜನ ಪ್ರೀತಿಯಿಂದ ಹೇಳ್ತಾರೆ. ಕಳೆದ ಚುನಾವಣೆಯಲ್ಲಿ ನಮ್ಮ ಮುಖಂಡರಲ್ಲೇ ಓವರ್ ಕಾನ್ಸಿಡೆನ್ಸ್ ಇತ್ತು. ಅದನ್ನ ಅವರೇ ಒಪ್ಪಿಕೊಂಡಿದ್ದಾರೆ. ಆದರೂ ಸ್ವಲ್ಪ ಎಡವಿದ್ರು. ಎಲ್ಲವನ್ನೂ ಸರಿಪಡಿಸಿ ಮೊದಲು ಪಕ್ಷ ಅಧಿಕಾರಕ್ಕೆ ತರ್ತೀವಿ ಎಂದು ಹೇಳಿದರು.

ರಾಜ್ಯ ರಾಜಕಾರಣಕ್ಕೆ ಕುಮಾರಣ್ಣ ಎಂಟ್ರಿ ವಿಚಾರಕ್ಕೆ ಮಾತನಾಡಿದ ಅವರು, ಈ ಬಗ್ಗೆ ಪ್ರಶ್ನೆಯೇ ದ್ವಂದ್ವ ಇದೆ. ಅವರು ರಾಜ್ಯಕ್ಕೆ ಬರ್ತಾರಾ, ಕ್ಷೇತ್ರಕ್ಕೆ ಬರ್ತಾರ ಅಂತ ಚರ್ಚೆ.ಮೊದಲು ರಾಜ್ಯಕ್ಕೆ ಬರ್ತಾರಾ ಎನ್ನುವ ವಿಚಾರಕ್ಕೆ ಉತ್ತರ ಕಂಡಿಡಿದುಕೊಳ್ಳೊಣ. ಬಳಿಕ ಯಾವ ಕ್ಷೇತ್ರಕ್ಕೆ ಬರ್ತಾರೆ ಅನ್ನೋದು ತೀರ್ಮಾನ ಆಗುತ್ತೆ ಎಂದು ತಿಕ್ಷಣವಾಗಿ ಉತ್ತರಿಸಿದರು.

ಕುಮಾರಣ್ಣ 4 ಬಾರಿ ಕ್ಷೇತ್ರ ಪ್ರತಿನಿಧಿಸಿದ್ದು ಅವರು ಮುಖ್ಯಮಂತ್ರಿಯಾಗಿ ಮಾಡಿದ ಹಲವಾರು ಕೆಲಸಗಳ ಬಗ್ಗೆ ಜನರಿಗೆ ಅರಿವಿದೆ. ಅಭಿವೃದ್ದಿ ವಿಚಾರದಲ್ಲಿ ಅವರಿಗಿರುವ ದೂರದೃಷ್ಟಿ ಜನತೆಗೆ ಗೊತ್ತಿದೆ. ಇವತ್ತಿನ ಕಾಂಗ್ರೆಸ್ ಪಕ್ಷ ಬಂದು ಏನು ಮಾಡಿದೆ, ರಸ್ತೆಗಳು ಏನಾಗಿದೆ. ಪೆನ್ನು ಪೇಪರ್ ಕೇಳುವ ಉಪಮುಖ್ಯಮಂತ್ರಿಗಳು ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

*ನಾನು ಎಲ್ಲೇ ಇದ್ದರು ನನ್ನ ಮನಸ್ಸು ರಾಮನಗರ ದಲ್ಲೇ ಇರುತ್ತದೆ*

ನಮ್ಮ ಪಕ್ಷದ ಚೌಕಟ್ಟಿನಲ್ಲಿ ನಾವು ಚರ್ಚೆ ಮಾಡಿದ್ದು ಕುಮಾರಣ್ಣನವರನ್ನು ರಾಜ್ಯ ನೋಡುತ್ತಿದ್ದು ನಾನು ಕ್ಷೇತ್ರಕ್ಕೆ ಸೀಮಿತವಾದರೆ ಇಲ್ಲೇ ನೋಡುತ್ತೇನೆ. ಆದರೆ ರಾಜ್ಯ ನೋಡಬೇಕು ನಾನು ಎಲ್ಲೇ ಇದ್ದರು ನನ್ನ ಮನಸ್ಸು ಇಲ್ಲೇ ಇರುತ್ತದೆ, ಸವಾಲು ಇರುತ್ತದೆ. ರಾಜಕಾರಣ ಸಮುದ್ರ ಇದ್ದಂತೆ 24ನೇ ತಾರೀಖು ಹಾಸನದಲ್ಲಿ ಬೃಹತ್ ಸಮಾವೇಶ ನಡೆಯುತ್ತದೆ, ಅಸೆಂಬ್ಲಿಯಲ್ಲಿ ಚರ್ಚೆ ಮಾಡುತ್ತೇವೆ ಎಂದರು.

*ಕಾಂಗ್ರೆಸ್ ನವರಿಗೆ ಡಬಲ್ ಸ್ಟ್ಯಾಂಡರ್ಡ್ ಏಕೆ?*

ಎಂಪಿ ಚುನಾವಣೆಯಲ್ಲಿ ಜನ ನಮಗೆ ವೋಟು ಮಾಡಿದ್ದಾರೆ. ನಮ್ಮ ಪರವಾಗಿ ನಿಲ್ಲುವ ಜನ ಇದ್ದಾರೆ. ಈಗಲೂ ಇದೆ ಎರಡು ಬಾರಿ ಮಂತ್ರಿ ಮಾಡಿದ ಕುಮಾರಣ್ಣರವರನ್ನು ಇನ್ನು ರಾಜ್ಯದಲ್ಲಿ ರಾಮನಗರಕ್ಕೆ ಬರುತ್ತಾರೆ ಎಂಬುದು ಅವರಿಗೆ ಗೊತ್ತಿರುವ ವಿಚಾರ.
ರಾಜ್ಯ ಸರ್ಕಾರ-ಕೇಂದ್ರ ಸರ್ಕಾರ ಸಂಘರ್ಷ ಮಾಡಿದರೆ ಬಡವಾಗುವುದು ರಾಜ್ಯ ಸರ್ಕಾರ. ಜಿ ರಾಮ್ ಜಿ , ಮನರೇಗಾ ಹೆಸರು ಬದಲಾವಣೆ ಮಾಡಿದ್ದಾರೆ. ಇದೆಲ್ಲಾ ಬೇಡ ಹೆಸರು ಬದಲಾವಣೆ ಮಾಡಿರುವುದಲ್ಲಾ ಪ್ರಶ್ನೆ ಅಲ್ಲ ತಾಂತ್ರಿಕವಾಗಿ ತೆಗೆದುಕೊಂಡ ವಿಚಾರ. ಅವರು ರಾಮನಗರ ಹೆಸರು ಬದಲಾವಣೆ ಮಾಡಿದರು ಇವತ್ತು ತುಮಕೂರು ಕ್ರೀಡಾಂಗಣಕ್ಕೆ ಪರಮೇಶ್ವರ್ ಹೆಸರು ಯಾಕೆ ಇಟ್ಟರು ಗಾಂಧಿ ಇರಲಿಲ್ಲವಾ, ಕಾಂಗ್ರೆಸ್ ನವರಿಗೆ ಡಬಲ್ ಸ್ಟ್ಯಾಂಡರ್ಡ್ ಏಕೆ ಎಂದರು.

ರಾಜ್ಯ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ಕುಮಾರಸ್ವಾಮಿ ಅವರ ಜನ್ಮದಿನವನ್ನು ಗುರುವಾರ ರಾಮನಗರ ತಾಲ್ಲೂಕು ಜೆಡಿಎಸ್ ಘಟಕ ಮತ್ತು ಮುಖಂಡರುಗಳು ನಗರದ ವಿವಿದೆಡೆ ಅದ್ದೂರಿಯಾಗಿ ಆಚರಿಸಿದರು.

ಬೆಂಗಳೂರಿನಿಂದ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಅವರಿಗೆ ತಾಲ್ಲೂಕಿನ ಸಂಗನಬಸವನದೊಡ್ಡಿ ಬಳಿಯಿಂದ ಬೈಕ್ ರ‍್ಯಾಲಿ ಮೂಲಕ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಕರೆ ತಂದರು. ಪಿಡಬ್ಲ್ಯೂಡಿ ವೃತ್ತದಲ್ಲಿ ಜೆಸಿಬಿ ಮೂಲಕ ಪುಷ್ಪವೃಷ್ಟಿ ಜತೆಗೆ ಕ್ರೇನ್ ನಿಂದ ಬೃಹತ್ ಹಾರವನ್ನು ಹಾಕಲಾಯಿತು. ಅಲ್ಲಿಂದ ತೆರೆದ ವಾಹನದಲ್ಲಿ ಚಾಮುಂಡೇಶ್ವರಿ ದೇವಾಲಯದವರೆಗೆ ಅದ್ದೂರಿಯಾಗಿ ಸ್ವಾಗತಿಸಿದರು.

ವಾಟರ್ ಟ್ಯಾಂಕ್‌ ವೃತ್ತದಲ್ಲೂ ಸಹ ಕ್ರೇನ್ ಬಳಸಿ ಬೃಹತ್ ಸೇಬಿನ ಹಾರ ಹಾಕಲಾಯಿತು. ನಂತರ ಕಾಯಿಸೊಪ್ಪಿನಬೀದಿ ಅರಳೀಮರದ ಹತ್ತಿರ ಕೇಕ್ ಕತ್ತರಿಸಿ ಚಾಮುಂಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ದೇವಾಲಯದ ಆವರಣದಲ್ಲಿ ಕೇಕ್ ಕತ್ತರಿಸಿದರು. ಯುವಕರು, ಪಕ್ಷದ ಕಾರ್ಯಕರ್ತರು ಮುಖಂಡರು ಪುಷ್ಪಹಾರ ಹಾಕಿ ಸಿಹಿ ತಿನ್ನಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ, ಮಾಜಿ ಶಾಸಕ ಎ.ಮಂಜುನಾಥ್, ತಾಲ್ಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಪ್ಪ ಅವರು ಸೇರಿದಂತೆ ತಾಲ್ಲೂಕಿನ ಪ್ರಮುಖ ಮುಖಂಡರು ಜತೆಯಲ್ಲಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ