LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದ್ರಾಕ್ಷಿ ಹಾಗೂ ಕಲ್ಲಂಗಡಿ ಮೇಳಕ್ಕೆ ಸಾರಿಗೆ ಮಂತ್ರಿ ಚಾಲನೆ 

 

ಸಂಸ್ಥೆಯು ಕಳೆದ ಆರು ದಶಕಗಳಿಂದ ಬೆಂಗಳೂರಿನ ಗ್ರಾಹಕರಿಗೆ ತಾಜಾ ಹಣ್ಣು

ಮತ್ತು ತರಕಾರಿಗಳನ್ನು ಸರಬರಾಜು ಮಾಡುವ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ. ಆಯಾ ಋತುಮಾನಗಳಲ್ಲಿ ಲಭ್ಯವಾಗುವ ಹಣ್ಣು ಮತ್ತು ತರಕಾರಿಗಳಿಗೆ ಹಾಗೂ ಹಬ್ಬದ ವಿಶೇಷ ಮೇಳಗಳನ್ನು ಆಯೋಜಿಸುವ ಮೂಲಕ ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆಯನ್ನು ಒದಗಿಸುವಲ್ಲಿ ನೆರವಾಗುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ಸಹ ಹಾಪ್‌ ಕಾಮ್ಸ್ ಸಂಸ್ಥೆಯಿಂದ ದ್ರಾಕ್ಷಿ ಹಾಗೂ ಕಲ್ಲಂಗಡಿ ಮೇಳ-2024ನ್ನು ಹಡ್ರನ್ ವೃತ್ತದ ಬಳಿ ಇರುವ ಹಾಪ್ ಕಾಮ್ಸ್ ಮಾರಾಟ ಮಳಿಗೆಯಲ್ಲಿ ಆಯೋಜಿಸಲಾಗಿರುತ್ತದೆ. ಮೇಳದ ಅಂಗವಾಗಿ ಗ್ರಾಹಕರಿಗೆ ಶೇಕಡಾ 10 ರ ರಿಯಾಯಿತಿ ದರದಲ್ಲಿ ಫೆಬ್ರವರಿ 29 ರವರೆಗೆ ದ್ರಾಕ್ಷಿ ಮತ್ತು ಕಲ್ಲಂಗಡಿ ಹಣ್ಣುಗಳನ್ನು ಮಾರಾಟ ಮಾಡಲಾಗುವುದು. ಮೇಳದ ಅಂಗವಾಗಿ ದ್ರಾಕ್ಷಿ ಹಾಗೂ ಕಲ್ಲಂಗಡಿ ತಳಿಗಳ ಪ್ರದರ್ಶನವನ್ನು ಸಹ ಏರ್ಪಡಿಸಲಾಗಿದೆ.

ರಾಜ್ಯದಲ್ಲಿ ಒಟ್ಟು 36,117 ಹೆಕ್ಟರ್ ಪ್ರದೇಶದಲ್ಲಿ ವಿವಿಧ ತಳಿಯ ಬೆಳೆಯಲಾಗುತ್ತಿದೆ. ಅದರಲ್ಲಿ ಮುಖ್ಯವಾಗಿ 31,086 ಹೆಕ್ಟರ್ ಪ್ರದೇಶದಲ್ಲಿ ಬೀಜ ರಹಿತ ದ್ರಾಕ್ಷಿಯನ್ನು ಬೆಳೆಯಲಾಗುತ್ತಿದೆ. ರಾಜ್ಯದ ಒಟ್ಟು ದಾಕ್ಷಿ ಉತ್ಪನ್ನ 7,74,993 ಮೆಟ್ರಿಕ್ ಟನ್ನಗಳಾಗಿದೆ. ರಾಜ್ಯದಲ್ಲಿ ಮುಖ್ಯವಾಗಿ ದ್ರಾಕ್ಷಿಯನ್ನು ವಿಜಯಪುರ, ಬಾಗಲಕೋಟೆ, ಬೆಳಗಾವಿ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಂತರ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದೆ.

ರಾಜ್ಯದಲ್ಲಿ ಕಲ್ಲಂಗಡಿ ಬೆಳೆಯನ್ನು 4.700 ಹೆಕ್ಟರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು ಒಟ್ಟು ಉತ್ಪನ್ನ 1,92,973 ಮೆಟ್ರಿಕ್ ಟನ್‌ಗಳಾಗಿರುತ್ತದೆ. ತುಮಕೂರು, ಚಿತ್ರದುರ್ಗ, ಕೋಲಾರ, ಚಾಮರಾಜನಗರ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಹೆಚ್ಚಾಗಿ ಬೆಳೆಯಲಾಗುತ್ತಿದೆ. ಪ್ರಸ್ತುತ ಸಾಲಿನಲ್ಲಿ ಮೇಳದಲ್ಲಿ 500 ಮೆಟ್ರಿಕ್ ಟನ್ ದ್ರಾಕ್ಷಿ ಹಾಗೂ 900 ಮೆಟ್ರಿಕ್ ಟನ್ ಕಲ್ಲಂಗಡಿ ಹಣ್ಣು ಮಾರಾಟದ ಗುರಿ ಹೊಂದಿದೆ.

ದ್ರಾಕ್ಷಿ ಹಣ್ಣಿನ ಸೇವನೆಯಿಂದ ಆಗುವ ಲಾಭಗಳು

ದ್ರಾಕ್ಷಿ ಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದ "ಸಿ" ಮತ್ತು 'ಕೆ' ಜೀವಸತ್ವಗಳು, ರಂಜಕ, ಕ್ಯಾಲ್ಲಿಯಂ, ಕಬ್ಬಿಣ ಮುಂತಾದ ಅಂಶಗಳನ್ನು ಹೊಂದಿದ್ದು ಹೃದಯದ ಆರೋಗ್ಯವನ್ನು ಹೆಚ್ಚಿಸುವಲ್ಲಿ ನೆರವಾಗುತ್ತದೆ.

ಬೆಂಗಳೂರು ನೀಲಿ, ಥಾಮಸನ್ ಸಿಡ್‌ಲೆಸ್, ಕೃಷ್ಣ ಶರದ್, ಸೋನಾಕಾ, ಸೂಪರ್ ಸೋನಾಕಾ, ತಾಸ -ಎ- ಗಣೇಶ್, ಇಂಡಿಯನ್ ರೆಡ್ ಗ್ಲೋಬ್, ಜಂಬೂ ಶರದ್, ಆಸ್ಟ್ರೇಲಿಯಾ ರೆಡ್ ಗ್ಲೋಬ್, ಪ್ಲೇಮ್ ಸೀಡ್‌ಲೆಸ್, ಶರದ್ ಸೀಡ್‌ಸ್.

ಕಲ್ಲಂಗಡಿ ಹಣ್ಣಿನ ಸೇವನೆಯಿಂದ ಆಗುವ ಲಾಭಗಳು

ಕಲ್ಲಂಗಡಿ ಹಣ್ಣನ್ನು ಸೇವಿಸುವುದರಿಂದ ದೇಹದಲ್ಲಿ ನೀರಿನಾಂಶವನ್ನು ಹೆಚ್ಚಿಸುವಲ್ಲಿ ಮತ್ತು ಚರ್ಮದ ಆರೋಗ್ಯವನ್ನು ಕಾಪಾಡುವಲ್ಲಿ ನೆರವಾಗುತ್ತದೆ ಹಾಗೂ ಹಣ್ಣಿನಲ್ಲಿ 'ಸಿ' ಮತ್ತು 'ಎ' ಜೀವಸತ್ವಗಳು ಹೇರಳವಾಗಿ ದೊರೆಯುತ್ತವೆ.

ಕಲ್ಲಂಗಡಿ ತಳಿಗಳು :- ಕಲ್ಲಂಗಡಿ ನಾಮದಾರಿ. ಕಿರಣ್ ಮತ್ತು ಹಳದಿ ತಿರುಳಿನ ಕಲ್ಲಂಗಡಿ ಬೆಂಗಳೂರಿನ ಮಹಾಜನತೆಯು ಈ ವಿಶೇಷ ಮೇಳದ ಪ್ರಯೋಜನವನ್ನು ಪಡೆಯಲು ವಿನಂತಿಸುತ್ತೇವೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ