LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಿರ್ಗಿಜ್ ಗಣರಾಜ್ಯಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ

ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಸಚಿವರ ಶೃಂಗಕ್ಕೆ ಭಾರತವನ್ನು ಪ್ರತಿನಿಧಿಸಿರುವ ಹೆಚ್.ಡಿ.ಕೆ, ಎಸ್‌.ಎಂ. ಕೃಷ್ಣ ಅವರ ನಂತರ ಎಸ್‌ಸಿಒ ಶೃಂಗದಲ್ಲಿ ಭಾಗವಹಿಸಿದ ಎರಡನೇ ಕನ್ನಡಿಗ, ಜಾಗತಿಕ ವೇದಿಕೆಯಲ್ಲಿ ನರೇಂದ್ರ ಮೋದಿ ಅವರ ಕೈಗಾರಿಕೆ ದೂರದೃಷ್ಟಿ ಬಗ್ಗೆ ಚರ್ಚಿಸಲಿರುವ ಕುಮಾರಸ್ವಾಮಿ, ಕೈಗಾರಿಕಾ ಸಹಕಾರ, ತಂತ್ರಜ್ಞಾನ ಪಾಲುದಾರಿಕೆ ಮತ್ತು ಹೂಡಿಕೆ ಅವಕಾಶಗಳ ಉತ್ತೇಜನೆ ಬಗ್ಗೆ ವಿಸ್ತೃತವಾಗಿ ಚರ್ಚೆ, ಎಸ್‌ಸಿಒ ಪ್ರಧಾನಿಗಳ ಬಲವಾದ ಸಮೃದ್ಧ ಯುರೇಷಿಯಾದ ದೃಷ್ಟಿಕೋನ ಪ್ರತಿಬಿಂಬಿಸುತ್ತದೆ ಎಂದ ಕೇಂದ್ರ ಸಚಿವರು.

ನವದೆಹಲಿ / ಬಿಷ್ಕೇಕ್‌ : ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕಿರ್ಗಿಜ್ ಗಣರಾಜ್ಯದಲ್ಲಿ (ಕಿರ್ಗಿಸ್ತಾನ್)‌ ಬುಧವಾರದಿಂದ ಆರಂಭವಾಗಲಿರುವ ನಾಲ್ಕು ದಿನಗಳ ʼಶಾಂಘೈ ಸಹಕಾರ ಸಂಸ್ಥೆʼ (ಎಸ್‌ಸಿಒ)ಯ ವಿವಿಧ ರಾಷ್ಟ್ರಗಳ ಕೈಗಾರಿಕಾ ಸಚಿವರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆ ರಾಷ್ಟ್ರದ ರಾಜಧಾನಿ ಬಿಷ್ಕೇಕ್‌ ನಗರಕ್ಕೆ ಮಂಗಳವಾರ ಬಂದಿಳಿದರು.news_1780421118_1_717.webp
 
ʼಶಾಂಘೈ ಸಹಕಾರ ಸಂಸ್ಥೆʼ ಜಗತ್ತಿನ ಅತ್ಯಂತ ಪ್ರಭಾವಶಾಲಿ ಪ್ರಾದೇಶಿಕ ಗುಂಪುಗಳಲ್ಲಿ ಒಂದಾಗಿದ್ದು, ಆರ್ಥಿಕವಾಗಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಭಾರತವನ್ನು ಸಚಿವ ಕುಮಾರಸ್ವಾಮಿ ಅವರು ಶೃಂಗಸಭೆಯಲ್ಲಿ ಪ್ರತಿನಿಧಿಸುತ್ತಿದ್ದಾರೆ.
 
*ಹೆಚ್.ಡಿ. ಕುಮಾರಸ್ವಾಮಿ ಅವರು ವಿದೇಶಾಂಗ ಖಾತೆ ಮಾಜಿ ಸಚಿವರಾಗಿದ್ದ ಎಸ್.ಎಂ. ಕೃಷ್ಣ ಅವರ ನಂತರ ಎಸ್‌ಸಿಒ ಶೃಂಗಸಭೆಯ ಸಚಿವರ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಎರಡನೇ ಪ್ರಮುಖ ಕನ್ನಡಿಗ ನಾಯಕರಾಗಿದ್ದಾರೆ.*
 
ಯುರೇಷಿಯಾ (ಏಷ್ಯಾ-ಯುರೋಪ್) ನಾದ್ಯಂತ ವಿಸ್ತರಿಸುತ್ತಿರುವ ಭಾರತದ ಆರ್ಥಿಕ ಮತ್ತು ಕಾರ್ಯತಂತ್ರದ ಹೆಜ್ಜೆಗುರುತನ್ನು ಗಮನದಲ್ಲಿಟ್ಟುಕೊಂಡು ಸಚಿವರ ಈ ಭೇಟಿ ವಿಶೇಷ ಮಹತ್ವ ಪಡೆದುಕೊಂಡಿದೆ.
 
ಕೈಗಾರಿಕಾ ಸಚಿವರ ಶೃಂಗಸಭೆಯಲ್ಲಿ ಭಾರತದ ಪ್ರತಿನಿಧಿಯಾಗಿ ಸಚಿವ ಕುಮಾರಸ್ವಾಮಿ ಅವರು ಎಸ್‌ಸಿಒ ಸದಸ್ಯ ರಾಷ್ಟ್ರಗಳಲ್ಲಿ ಕೈಗಾರಿಕಾ ಬೆಳವಣಿಗೆ, ತಾಂತ್ರಿಕ ಸಹಯೋಗ, ಸುಸ್ಥಿರ ಉತ್ಪಾದನೆ ಮತ್ತು ಪೂರೈಕೆ ಸರಪಳಿಗಳಿಗಾಗಿ ರಾಷ್ಟ್ರದ ದೃಷ್ಟಿಕೋನವನ್ನು ಪ್ರತಿಪಾದಿಸುವರು.
 
*ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ:*
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ಜಾಗತಿಕ ಉತ್ಪಾದನಾ ಕೇಂದ್ರವಾಗಿ ವೇಗವಾಗಿ ಹೊರಹೊಮ್ಮುತ್ತಿರುವ ಮತ್ತು ಈ ಪ್ರದೇಶದ ವಿಕಸನಗೊಳ್ಳುತ್ತಿರುವ ಕೈಗಾರಿಕಾ ಭೂದೃಶ್ಯದಲ್ಲಿ ತನ್ನನ್ನು ತಾನು ವಿಶ್ವಾಸಾರ್ಹ ಪಾಲುದಾರನಾಗಿರುವ ಸಮಯದಲ್ಲಿ ಈ ಮಹತ್ವದ ಶೃಂಗದಲ್ಲಿ ಸಚಿವ ಕುಮಾರಸ್ವಾಮಿ ಅವರ ಭಾಗವಹಿಸುವಿಕೆಗೆ ಹೆಚ್ಚು ಪ್ರಾಮುಖ್ಯತೆ ಬಂದಿದೆ.
 
ಶಾಂಘೈ ಸಹಕಾರ ಸಂಸ್ಥೆ ವಿಶ್ವದ ಅತಿದೊಡ್ಡ ಬಹುಪಕ್ಷೀಯ ಗುಂಪುಗಳಲ್ಲಿ ಒಂದಾಗಿದ್ದು, ಯುರೇಷಿಯಾದಾದ್ಯಂತ ಹತ್ತು ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ ಮತ್ತು ಜಾಗತಿಕ ಜನಸಂಖ್ಯೆ ಮತ್ತು ಆರ್ಥಿಕತೆಯ ಗಣನೀಯ ಪಾಲು ಹೊಂದಿದೆ. 2017ರಲ್ಲಿ ಎಸ್‌ʼಸಿಒ (SCO) ನ ಪೂರ್ಣ ಸದಸ್ಯತ್ವ ಪಡೆದ ಭಾರತವು ರಾಜಕೀಯ, ಆರ್ಥಿಕ, ಭದ್ರತೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತನ್ನ ಹೆಜ್ಜೆಗುರುತುಗಳನ್ನು ಪರಿಣಾಮಕಾರಿಯಾಗಿ ವಿಸ್ತರಿಸಿದೆ.
 news_1780421118_2_363.webp
ಭಾರತಕ್ಕೆ, ಎಸ್‌ʼಸಿಒ ವೇದಿಕೆಯು ಮಧ್ಯ ಏಷ್ಯಾದ ದೇಶಗಳೊಂದಿಗೆ ಸಹಕಾರವನ್ನು ಮತ್ತಷ್ಟು ಗಾಢವಾಗಿಸಲು, ಆರ್ಥಿಕ ಪಾಲುದಾರಿಕೆಗಳನ್ನು ಬಲಪಡಿಸಲು ಮತ್ತು ಕಾರ್ಯತಂತ್ರದ ಪ್ರಮುಖ ಸಂಪರ್ಕಗಳನ್ನು ಉತ್ತೇಜಿಸಲು ಒಂದು ಅನನ್ಯ ಅವಕಾಶ ಒದಿಗಿಸಿದೆ. ಮಧ್ಯ ಏಷ್ಯಾದ ಹೃದಯ ಭಾಗದಲ್ಲಿರುವ ಮತ್ತು ಚೀನ ಮತ್ತು ವಿಶಾಲ ಮಧ್ಯ ಏಷ್ಯಾ ಪ್ರದೇಶದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿರುವ ಕಿರ್ಗಿಜ್ ಗಣರಾಜ್ಯವು ಭವಿಷ್ಯದ ಕೈಗಾರಿಕಾ ಸಹಕಾರದ ಕುರಿತು ಚರ್ಚೆಗಳಿಗೆ ಸೂಕ್ತ ಸ್ಥಳವಾಗಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟಿದ್ದಾರೆ.
*ಹೊಸ ಅವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆ:* 
ಸಚಿವರ ಶೃಂಗವು ಕೈಗಾರಿಕಾ ಸಹಕಾರವನ್ನು ಬಲಪಡಿಸುವುದು, ತಾಂತ್ರಿಕ ಪಾಲುದಾರಿಕೆಗಳನ್ನು ಉತ್ತೇಜಿಸುವುದು, ನಾವೀನ್ಯತೆ-ನೇತೃತ್ವದ ಬೆಳವಣಿಗೆಯನ್ನು ಹೆಚ್ಚಿಸುವುದು ಹಾಗೂ ಸದಸ್ಯ ರಾಷ್ಟ್ರಗಳ ನಡುವೆ ಹೂಡಿಕೆ ಮತ್ತು ಉತ್ಪಾದನಾ ಸಹಯೋಗಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸುವತ್ತ ಗಮನಹರಿಸುವ ನಿರೀಕ್ಷೆ ಇದೆ. ಕೈಗಾರಿಕಾ ಯೋಜನೆಗಳನ್ನು ಸುಗಮಗೊಳಿಸುವ, ಕೈಗಾರಿಕಾ ವಲಯಗಳ ನಡುವಿನ ಸಹಕಾರವನ್ನು ಸುಧಾರಿಸುವ ಮತ್ತು ಸುಸ್ಥಿರ ಮತ್ತು ಸಂಪನ್ಮೂಲ-ಸಮರ್ಥ ಉತ್ಪಾದನಾ ಪದ್ಧತಿಗಳನ್ನು ಉತ್ತೇಜಿಸುವ ಗುರಿ ಹೊಂದಿರುವ ಕಾರ್ಯವಿಧಾನಗಳನ್ನು ಸಹ ಶೃಂಗಸಭೆಯ ಚರ್ಚೆಗಳು ಒಳಗೊಂಡಿರುತ್ತವೆ.
 
ಸದಸ್ಯ ರಾಷ್ಟ್ರಗಳಿಗೆ ಸ್ಪಷ್ಟವಾದ ಆರ್ಥಿಕ ಪ್ರಯೋಜನಗಳನ್ನು ಸೃಷ್ಟಿಸುವ, ಪ್ರಾಯೋಗಿಕ ಮತ್ತು ಫಲಿತಾಂಶ ಆಧರಿತ ಸಹಕಾರವನ್ನು ಭಾರತ ಬಲವಾಗಿ ಪ್ರತಿಪಾದಿಸಲಿದೆ. ಜಗತ್ತಿನ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾದ ಭಾರತವು ಕೈಗಾರಿಕಾ ಪರಿವರ್ತನೆ, ಡಿಜಿಟಲ್ ನಾವೀನ್ಯತೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಸುಸ್ಥಿರ ಉತ್ಪಾದನೆಯಲ್ಲಿ ವ್ಯಾಪಕ ಅನುಭವ, ಅವಕಾಶಗಳನ್ನು ಹೊಂದಿದೆ ಎಂಬ ಅಂಶವನ್ನು ಸಚಿವರು ಶೃಂಗದಲ್ಲಿ ಪ್ರತಿಪಾದಿಸುವರು.
 
ಈ ಚರ್ಚೆಗಳ ಸಮಯದಲ್ಲಿ ಸಚಿವ ಕುಮಾರಸ್ವಾಮಿ ಅವರು; ಭಾರತದ ಬೆಳೆಯುತ್ತಿರುವ ಕೈಗಾರಿಕಾ ಸಾಮರ್ಥ್ಯಗಳು ಮತ್ತು ಜಾಗತಿಕ ಉತ್ಪಾದನೆ ಮತ್ತು ಹೂಡಿಕೆಗೆ ಆದ್ಯತೆಯ ತಾಣವಾಗಿ ಭಾರತವು ಹೊರ ಹೊಮ್ಮುವುದನ್ನು ಎಸ್‌ʼಸಿಒ ಸದಸ್ಯ ರಾಷ್ಟ್ರಗಳ ಮುಂದೆ ಆಳವಾಗಿ ಪ್ರತಿಪಾದಿಸಲಿದ್ದಾರೆ. ದೇಶೀಯ ಉತ್ಪಾದನೆಯನ್ನು ಬಲಪಡಿಸುವುದು, ಮಾಲಿನ್ಯಮುಕ್ತ ಚಲನಶೀಲತೆ ವೇಗಗೊಳಿಸುವುದು ಮತ್ತು ಮುಂದುವರಿದ ಕೈಗಾರಿಕಾ ಪೂರಕ ವ್ಯವಸ್ಥೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿರುವ ಪರಿವರ್ತನಾ ಉಪಕ್ರಮಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಬೃಹತ್ ಕೈಗಾರಿಕಾ ಸಚಿವಾಲಯವು ಮುಂಚೂಣಿಯಲ್ಲಿದೆ. ಪಿಎಂ ಇ-ಡ್ರೈವ್‌ (PM E-DRIVE) ಹಾಗೂ ಇನ್ನಿತರ ಪ್ರಮುಖ ಕಾರ್ಯಕ್ರಮಗಳು ಭವಿಷ್ಯದಲ್ಲಿ ಕೈಗಾರಿಕಾ ಅಭಿವೃದ್ಧಿ ಮತ್ತು ಹಸಿರು ತಂತ್ರಜ್ಞಾನಗಳಿಗೆ ಭಾರತದ ಬದ್ಧತೆಗೆ ಸಾಕ್ಷಿಯಾಗಿವೆ ಎಂದು ಅವರು ಹೇಳಿದರು.news_1780421116_0_872.webp
 
ಎಸ್‌ʼಸಿಒ ಸದಸ್ಯ ರಾಷ್ಟ್ರಗಳ ನಡುವೆ ತಂತ್ರಜ್ಞಾನ ವಿನಿಮಯ, ಕೈಗಾರಿಕಾ ಪಾರ್ಕ್‌ʼಗಳ ಸ್ಥಾಪನೆ, ನಾವೀನ್ಯತೆ ಪಾಲುದಾರಿಕೆ ಮತ್ತು ಬಲವಾದ ಉತ್ಪಾದನಾ ಸಂಪರ್ಕಗಳ ಮೂಲಕ ಕೈಗಾರಿಕಾ ಸಹಕಾರವನ್ನು ಹೆಚ್ಚಿಸುವ ಕ್ರಮಗಳ ಬಗ್ಗೆಯೂ ಶೃಂಗಸಭೆಯಲ್ಲಿ ಚರ್ಚಿಸುವ ನಿರೀಕ್ಷೆ ಇದೆ. ಈ ಚರ್ಚೆಗಳು ಅತ್ಯುತ್ತಮ ಪೂರೈಕೆ ಸರಪಳಿಗಳನ್ನು ರೂಪಿಸುವುದು, ನಾವೀನ್ಯತೆಗೆ ಉತ್ತೇಜನ ನೀಡುವುದು ಮತ್ತು ಉದಯೋನ್ಮುಖ ಮಾರುಕಟ್ಟೆಗಳಲ್ಲಿ ಕೈಗಾರಿಕಾ ಪಾಲುದಾರಿಕೆಗಳನ್ನು ವಿಸ್ತರಿಸುವ ಭಾರತದ ವಿಶಾಲ ದೃಷ್ಟಿಕೋನದೊಂದಿಗೆ ನಿಕಟವಾಗಿ ಹೊಂದಿಕೆ ಆಗುತ್ತವೆ ಎಂದು ಸಚಿವರು ಆಶಯ ವ್ಯಕ್ತಪಡಿಸಿದ್ದಾರೆ.
ಎಸ್‌ʼಸಿಒ (SCO) ರಾಷ್ಟ್ರಗಳಲ್ಲಿ ಭಾರತೀಯ ಉತ್ಪಾದಕರು ಮತ್ತು ಉದ್ಯಮಗಳಿಗೆ ಅವಕಾಶಗಳನ್ನು ವಿಸ್ತರಿಸುವುದು ಭಾರತದ ಪ್ರಮುಖ ಆಸಕ್ತಿಯಾಗಿದೆ. ಭಾರತೀಯ ಎಂಜಿನಿಯರಿಂಗ್ ಸರಕುಗಳು, ಯಂತ್ರೋಪಕರಣ, ವಿದ್ಯುತ್ ಉಪಕರಣಗಳು ಮತ್ತು ಕೈಗಾರಿಕಾ ಉತ್ಪನ್ನಗಳು ಈಗಾಗಲೇ ಒಕ್ಕೂಟ ಸದಸ್ಯ ರಾಷ್ಟ್ರಗಳಲ್ಲಿ ಮಾರುಕಟ್ಟೆಗಳನ್ನು ಕಂಡುಕೊಂಡಿರುವುದರಿಂದ, ಈ ವೇದಿಕೆಯು ಆಳವಾದ ವಾಣಿಜ್ಯ ತೊಡಗಿಸಿಕೊಳ್ಳುವಿಕೆ ಮತ್ತು ಕೈಗಾರಿಕಾ ಸಹಯೋಗಕ್ಕೆ ಹೊಸ ಅವಕಾಶಗಳನ್ನು ನೀಡುತ್ತದೆ.
 
ಮಧ್ಯ ಏಷ್ಯಾ ಮತ್ತು ಯುರೇಷಿಯನ್ ಪ್ರದೇಶದೊಂದಿಗೆ ಭಾರತದ ಸಂಬಂಧಗಳನ್ನು ಬಲಪಡಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಗಾಢವಾದ ಒತ್ತು ನೀಡುವುದನ್ನು ಈ ಭೇಟಿ ಪ್ರತಿಬಿಂಬಿಸುತ್ತದೆ. ಭಾರತವು ಎಸ್‌ʼಸಿಒ ಚೌಕಟ್ಟಿನೊಳಗೆ ಹೆಚ್ಚು ಸಕ್ರಿಯ ಪಾತ್ರ ವಹಿಸಿದೆ ಹಾಗೂ ಸಂವಾದ, ಆರ್ಥಿಕ ಸಹಕಾರ ಮತ್ತು ಜನಕೇಂದ್ರಿತ ಅಭಿವೃದ್ಧಿಯನ್ನು ಪ್ರತಿಪಾದಿಸುತ್ತಿದೆ. ಭಾರತದ ಕೊಡುಗೆಗಳು ಪ್ರಾದೇಶಿಕ ಸ್ಥಿರತೆ, ಸಮೃದ್ಧಿ ಮತ್ತು ಸುಸ್ಥಿರ ಬೆಳವಣಿಗೆಗೆ ಬದ್ಧವಾಗಿರುವ ಜವಾಬ್ದಾರಿಯುತ ಮತ್ತು ರಚನಾತ್ಮಕ ಪಾಲುದಾರನಾಗಿ ತನ್ನ ಸ್ಥಾನವನ್ನು ಬಲಪಡಿಸಿವೆ.
 
ಸಚಿವರ ಈ ಭೇಟಿಯು ಸಚಿವರ ನಿಯಮಿತ ಭೇಟಿಯನ್ನು ಮೀರಿದ್ದಾಗಿದ್ದು, ಇದು ಉತ್ಪಾದನಾ ಶಕ್ತಿಯಾಗಿ ಭಾರತದ ವಿಶ್ವಾಸ, ಬಹುಪಕ್ಷೀಯ ಸಹಕಾರಕ್ಕೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಬಲವಾದ ಕೈಗಾರಿಕಾ ಪಾಲುದಾರಿಕೆಗಳನ್ನು ನಿರ್ಮಿಸುವ ಇಚ್ಛಾಶಕ್ತಿಯನ್ನು ಪ್ರತಿನಿಧಿಸುತ್ತದೆ. ಅತಿ ಮುಖ್ಯವಾಗಿ ಕರ್ನಾಟಕಕ್ಕೆ ಹೆಮ್ಮೆಯ ಸಂಗತಿಯಾಗಿದ್ದು, ರಾಜ್ಯದ ಮತ್ತೊಬ್ಬ ನಾಯಕರು ಭಾರತದ ದನಿಯನ್ನು ಅತ್ಯಂತ ಪ್ರಭಾವಿ ವೇದಿಕೆಯಾದ ʼಶಾಂಘೈ ಸಹಕಾರ ಸಂಸ್ಥೆʼ (ಎಸ್‌ಸಿಒ) ಯಲ್ಲಿ ಮೊಳಗಿಸಲಿದ್ದಾರೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಲೇಬೇಕು: ಸುನೀಲ್ ಕುಮಾರ್ ಎನ್ ಒತ್ತಾಯಕಾಂಗ್ರೆಸ್ ಸಮಿತಿ ಸದಸ್ಯರಾಗಿರುವ ಸಿದ್ದರಾಮಯ್ಯರಿಗೆ ರಣದೀಪ್ ಸಿಂಗ್ ಸುರ್ಜೇವಾಲ ಅಭಿನಂದನೆನೂತನ ಸರ್ಕಾರದಲ್ಲಿ ಸಂತೋಷ್ ಲಾಡ್ ಅವರಿಗೆ ಡಿಸಿಎಂ ನೀಡುವಂತೆ ಒತ್ತಾಯಯುವ ವಕೀಲ ಮುತ್ತು ಕಾಳೆ ಅವರ ಹುಟ್ಟುಹಬ್ಬ ಆಚರಣೆBMTC ಸಿಬ್ಬಂದಿ ವರ್ಗದವರಿಗೆ ಆರೋಗ್ಯ ತಪಾಸಣಾ ಶಿಬಿರಕಿರ್ಗಿಜ್ ಗಣರಾಜ್ಯಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿಶಾಸಕ ವಿಜಯಾನಂದ್ ಎಸ್.ಕಾಶಪ್ಪನವರ್ ಸಚಿವ ಸ್ಥಾನಕ್ಕೆ ಒತ್ತಾಯಮೈಸೂರು ವಾರಿಯರ್ಸ್ ಪ್ರತಿಭಾನ್ವೇಷಣೆ 213 ಯುವ ಕ್ರಿಕೆಟಿಗರ ಸತ್ವಪರೀಕ್ಷೆಸಿಎಂ ಅಧಿಕಾರ ಹಸ್ತಾಂತರ ವಿಚಾರ ಅಂತಿಮ ಘಟ್ಟ, ಬೆಂಗಳೂರಿನಲ್ಲಿ ಚರ್ಚೆಗಳ ಮಹಾಪೂರಕೇಂದ್ರ ಬಿಜೆಪಿ ಸರ್ಕಾರ ಜನಸಾಮಾನ್ಯರ ಲೂಟಿ ಮಾಡಲು ಹೊರಟಿದೆ :ಸುರ್ಜೆವಾಲಾ