LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೂಗಿನಲ್ಲಿ ರಕ್ತಸ್ರಾವ, ಆಸ್ಪತ್ರೆಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಡಿಸ್ಚಾರ್ಜ್

ಬೆಂಗಳೂರು: ಮೂಗಿನಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆದ ನಂತರ ಜೆಪಿ ನಗರದ ತಮ್ಮ ನಿವಾಸಕ್ಕೆ ವಾಪಸ್ಸಾದರು.

ನಗರ ಖಾಸಗಿ ಹೋಟೆಲ್ ನಲ್ಲಿ ಜೆಡಿಎಸ್ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಮಾಧ್ಯಮಗಳ ಜತೆ ಮಾತನಾಡುವ ಸಂದರ್ಭದಲ್ಲಿ ಸಚಿವರಿಗೆ ಮೂಗಿನಲ್ಲಿ ರಕ್ತಸ್ರಾವ ಉಂಟಾಯಿತು.

ಕೂಡಲೇ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದ ಸಚಿವರನ್ನು ವೈದ್ಯರು ಕೆಲ ಗಂಟೆಗಳ ಕಾಲ ನಿಗಾದಲ್ಲಿ ಇರಿಸಿ ಅವಲೋಕನ ಮಾಡಿದರು. ಬಳಿಕ ಸೂಕ್ತ ಚಿಕಿತ್ಸೆ ನೀಡಿ ಅವರನ್ನು ಮನೆಗೆ ಕಳಿಸಿಕೊಟ್ಟರು.

*ಯಾರಿಗೂ ಆತಂಕ ಬೇಡ*

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ತಮ್ಮ ನಿವಾಸಕ್ಕೆ ಹೊರಡುವ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಅವರು, ಯಾರು ಆತಂಕಕ್ಕೆ ಒಳಗಾಗುವುದು ಅವಶ್ಯಕತೆ ಇಲ್ಲ. ನಮ್ಮ ಕಾರ್ಯಕರ್ತರು ಅಭಿಮಾನಿಗಳಿಗೆ ಮನವಿ ಮಾಡೋದು ಇಷ್ಟೇ.. ನಿಮ್ಮಗಳ ಶುಭ ಹಾರೈಕೆ ಇರುವರೆಗೆ, ಭಗವಂತನ ಕೃಪೆ, ತಂದೆ ತಾಯಿ ಆಶೀರ್ವಾದ ಇರುವವರೆಗೆ ಯಾವುದೇ ಅಪಾಯವಿಲ್ಲ ಎಂದರು.

ಮೂರು ಬಾರಿ ನನಗೆ ಹೃದಯ ಕವಾಟನ್ನು ಬದಲಾವಣೆ ಮಾಡಲಾಗಿದೆ. ಬ್ಲಡ್ ತಿನ್ನರ್ ಮಾತ್ರೆ ತೆಗೆದುಕೊಳ್ಳುತ್ತೇನೆ. ರಕ್ತ ಗಟ್ಟಿ ಆಗಬಾರದು ಎನ್ನುವ ಕಾರಣಕ್ಕೆ ಈ ಮಾತ್ರೆ ತೆಗೆದುಕೊಳ್ಳುತ್ತೇನೆ. ಒತ್ತಡ ಜಾಸ್ತಿಯಾದಾಗ, ವಿಶ್ರಾಂತಿ ಇಲ್ಲದೆ ಇದ್ದಾಗ ನನಗೆ ಮೂಗಿನಿಂದ ರಕ್ತಸ್ರಾವ ಆಗುವುದು ಸಹಜ. ಕೆಲಸದ ಒತ್ತಡ ಕಡಿಮೆ ಮಾಡಿಕೊಳ್ಳಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ನನಗೆ ಸಿಕ್ಕಿರುವ ಸಮಯ ಒಂದೊಂದು ಕ್ಷಣವು ಮುಖ್ಯ. ಜನರಿಗೆ ಎನಾದರೂ ಒಂದು ಸಹಾಯ ಮಾಡಬೇಕು. ಕೇಂದ್ರದಿಂದ ರಾಜ್ಯಕ್ಕೆ ಕೊಡುಗೆ ಕೊಡಬೇಕು ಎಂದರು ಅವರು.

ಜನರು ನಂಬಿಕೆ ಇಟ್ಟು ದೆಹಲಿಗೆ ಕಳಿಸಿದ್ದಾರೆ. ಜನತೆ ವಿಶ್ವಾಸಕ್ಕೆ ಧಕ್ಕೆ ತರುವುದಿಲ್ಲ. ಇದೊಂದು ತಾತ್ಕಾಲಿಕ ಸಮಸ್ಯೆ ಅಷ್ಟೇ. ಯಾರು ಆತಂಕಪಡುವುದು ಬೇಡ. ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದು ಅವರು ಸಲಹೆ ಮಾಡಿದ್ದಾರೆ. 92 ವರ್ಷಗಳ ದೇವೇಗೌಡರು ನಾಳೆಯ ದಿನ ಸಂಸತ್ತಿನಲ್ಲಿ ಕಾವೇರಿ ವಿಚಾರ ಪ್ರಸ್ತಾಪ ಮಾಡಲಿದ್ದಾರೆ. ಡಿಎಂಕೆ ಮತ್ತು ಇತರೆ ಸದಸ್ಯರು ಅಡ್ಡಿಪಡಿಸುವ ಕೆಲಸ ಮಾಡುತ್ತಾರೆ. ಆ ಸಂದರ್ಭದಲ್ಲಿ ನಾನು ಅವರ ಜೊತೆಗೆ‌ ಇರಬೇಕು ಎಂದು ಕೇಂದ್ರ ಸಚಿವರು ಹೇಳಿದರು.

ರಾತ್ರಿ ನನ್ನ ದೇಹದಲ್ಲಿನ ಏರುಪೇರು ನೋಡಿಕೊಂಡು ದೆಹಲಿ ಪ್ರವಾಸ ನಿರ್ಧಾರ ಮಾಡುತ್ತೇನೆ. ವೈದ್ಯರಿಗೂ ಈ ಬಗ್ಗೆ ಮಾಹಿತಿ ನೀಡುತ್ತೇನೆ ಎಂದ ಅವರು; ಪಾದಯಾತ್ರೆ ಮಾಡದೇ ಇರುವುದಕ್ಕೆ ನನ್ನ ಆರೋಗ್ಯ ಸಂಪೂರ್ಣ ಕೆಟ್ಟಿಲ್ಲ. ಅದಕ್ಕೆ ಇನ್ನೂ ಒಂದು ವಾರ ಸಮಯ ಇದೆ. ನಾನು ಇಲ್ಲದಿದ್ದರೆ ನಿಖಿಲ್ ಕುಮಾರಸ್ವಾಮಿ ನಮ್ಮ ಶಾಸಕರ ಜೊತೆ ಪಾದಯಾತ್ರೆ ಮಾಡುತ್ತಾರೆ. ಈ ಬಗ್ಗೆ ಕಾರ್ಯಕರ್ತರಿಗೆ ಆತಂಕ ಬೇಡ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಈ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ, ಪಕ್ಷದ ಶಾಸಕರು, ಮಾಜಿ ಶಾಸಕರು ಇದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ