ಬೆಂಗಳೂರು: UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕದ ಪ್ರಸ್ತಾವನೆಯನ್ನು ಹಿಂಪಡೆಯಬೇಕು ಹಾಗೂ ದೇಶದ ಜನರ ಹಣ ಲೂಟಿ ಮಾಡುವುದನ್ನು ಕೂಡಲೇ ಪ್ರಧಾನಿ ಶ್ರೀ ನರೇಂದ್ರ ಮೋದಿಗಳೇ, ಕೈ ಬಿಡಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಸ್ ಮನೋಹರ್ ತಿಳಿಸಿದರು.
ಬೆಂಗಳೂರಿನ ಕಾಂಗ್ರೆಸ್ ಭವನದ ಮುಂದೆ ಕೇಂದ್ರದ ವಿರುದ್ದ ಪ್ರತಿಭಟನೆ ಮಾಡಿ ಮಾತನಾಡಿದ ಅವರು, ಅಕ್ಟೋಬರ್ 15ರಿಂದ ₹2,000ಕ್ಕಿಂತ ಹೆಚ್ಚಿನ UPI ವಹಿವಾಟುಗಳ ಮೇಲೆ 0.4% MDR ಶುಲ್ಕ ವಿಧಿಸುವ ಪ್ರಸ್ತಾವನೆ ಕುರಿತು ಸಾರ್ವಜನಿಕರಲ್ಲಿ ಆತಂಕ ಮೂಡಿದೆ. UPI ಇಂದು ಸಾಮಾನ್ಯ ಜನರು, ಸಣ್ಣ ವ್ಯಾಪಾರಿಗಳು, ಉದ್ಯೋಗಿಗಳು ಹಾಗೂ ಮಧ್ಯಮ ವರ್ಗದವರು ವ್ಯಾಪಕವಾಗಿ ಬಳಸುತ್ತಿರುವ ಡಿಜಿಟಲ್ ಪಾವತಿ ಹಣದ ವ್ಯವಸ್ಥೆಯಾಗಿದೆ.
ಈಗಾಗಲೇ ಡಿಜಿಟಲ್ ಪಾವತಿಗಳು ಜನರ ದೈನಂದಿನ ಜೀವನದ ಅವಿಭಾಜ್ಯ ಭಾಗವಾಗಿರುವ ಸಂದರ್ಭದಲ್ಲಿ, ಅದರ ಮೇಲೆ ಹೆಚ್ಚುವರಿ ಶುಲ್ಕ ವಿಧಿಸುವ ಯಾವುದೇ ಕ್ರಮವು ಸಾಮಾನ್ಯ ಜನರು ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ಮತ್ತೊಂದು ಇದು ಆರ್ಥಿಕ ಹೊರೆಯಾಗಲಿದೆ ಹಾಗೂ
ಕೇಂದ್ರ ಸರ್ಕಾರ ನಡೆಸುತ್ತಿರುವ ದಬ್ಬಾಳಿಕೆಯು ಆಗಿದೆ,
₹2,000ಕ್ಕಿಂತ ಹೆಚ್ಚಿನ ಪ್ರತಿಯೊಂದು ವಹಿವಾಟಿಗೂ ಶುಲ್ಕ ವಿಧಿಸುವ ಪ್ರಸ್ತಾವನೆಯಿಂದ ದಿನನಿತ್ಯದ ವ್ಯವಹಾರಗಳಲ್ಲಿ ಹೆಚ್ಚುವರಿ ವೆಚ್ಚ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಕೇಂದ್ರ ಸರ್ಕಾರವು ಈ ಪ್ರಸ್ತಾವನೆ ಕುರಿತು ಸ್ಪಷ್ಟನೆ ನೀಡಬೇಕು ಮತ್ತು ಜನಸಾಮಾನ್ಯರ ಮೇಲೆ ಹೆಚ್ಚುವರಿ ಹೊರೆ ಬೀಳದಂತೆ ಕ್ರಮ ಕೈಗೊಳ್ಳಬೇಕು.
ಬೆಲೆ ಏರಿಕೆಯಿಂದ ಈಗಾಗಲೇ ಜನಸಾಮಾನ್ಯರ ಬದುಕು ದುಸ್ತರ ಆಗಿದೆ ನರೇಂದ್ರ ಮೋದಿ ರವರ ಆಡಳಿತದಲ್ಲಿ ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ,
ಒಂದೆಡೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಆಹಾರ, ಸಾರಿಗೆ ಮತ್ತು ಕುಟುಂಬದ ಖರ್ಚುಗಳನ್ನು ನಿರ್ವಹಿಸುವುದು ಸಾಮಾನ್ಯ ಕುಟುಂಬಗಳಿಗೆ ಸವಾಲಾಗಿರುವ ಸಂದರ್ಭದಲ್ಲಿ, ಮತ್ತೊಂದೆಡೆ ಡಿಜಿಟಲ್ ಪಾವತಿಗಳ ಮೇಲೂ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾವನೆ ಜನರ ಮೇಲಿನ ಆರ್ಥಿಕ ಒತ್ತಡವನ್ನು ಮತ್ತಷ್ಟು ಹೆಚ್ಚಿಸುವ ಆತಂಕ ಮೂಡಿಸಿದೆ.
ಸಾಮಾನ್ಯ ಜನರ ಆದಾಯಕ್ಕೆ ಅನುಗುಣವಾಗಿ ಖರ್ಚು ನಿರ್ವಹಿಸುವುದು ದಿನದಿಂದ ದಿನಕ್ಕೆ ಕಷ್ಟವಾಗುತ್ತಿರುವ ಸಂದರ್ಭದಲ್ಲಿ, ಕೇಂದ್ರ ಬಿಜೆಪಿ ಸರ್ಕಾರದ ನೀತಿಗಳು ಜನರ ಮೇಲಿನ ಹೊರೆಯನ್ನು ಕಡಿಮೆ ಮಾಡುವ ಬದಲು ಹೆಚ್ಚು ಮಾಡುತ್ತಿದೆ
ಹೊಸ ಹೊಸ ಶುಲ್ಕಗಳ ಮೂಲಕ ಹೆಚ್ಚುವರಿ ಹೊರೆ
ಜನಸಾಮಾನ್ಯರ ಮೇಲೆ ತೆರಿಗೆಗಳನ್ನು ವಿಧಿಸುತ್ತಿದೆ,
ಅಮೆರಿಕ ಅಧ್ಯಕ್ಷ ಟ್ರಂಪ್ ಒತ್ತಡಕ್ಕೆ ಭಯಪಡುವ ನರೇಂದ್ರ ಮೋದಿ ದೇಶದ ಜನರ ಹಿತ ಕಾಪಾಡದೇ ವಿದೇಶದ ನೀತಿಗಳಿಗೆ ಮಣಿಯುತ್ತಿದೆ ಕೂಡಲೆ ಈ ನಿಮ್ಮ ನಿರ್ಧಾರವನ್ನ ಹಿಂಪಡೆಯಬೇಕು,
ದೇಶದ ಜನರ ಆರ್ಥಿಕ ಹೊರೆಯನ್ನು ಇಳಿಸಬೇಕೆಂದು ಈ ಪ್ರತಿಭಟನೆಯ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರವಿತ್ತ ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ರವರನ್ನು ಆಗ್ರಹ ಪಡಿಸಲಾಯಿತು,
ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಸ್ ಮನೋಹರ್ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಎ. ಆನಂದ್, ಜಿ ಪ್ರಕಾಶ್, ಲಕ್ಷ್ಮಿನಾರಾಯಣ್, ಉಮೇಶ್, ಆನಂದ್ , ಪುಟ್ಟರಾಜು , ಚಂದ್ರಶೇಖರ್, ಕುಶಾಲ್ ಹರವೇಗೌಡ, ರಂಜೀತ್ ಕುಮಾರ್ ಮಾಧವಹನೂರು, ಪ್ರವೀಣ್ ರಾವ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದರು.