ಕೇರಳ: ಕೇರಳಂನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಸೋಮವಾರ ತಿರುವನಂತಪುರಂನಲ್ಲಿ ನಡೆಯಿತು. ಅದಕ್ಕೂ ಮುನ್ನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದ ವಿಡಿ ಸತೀಶನ ಅವರನ್ನು ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿ ಶುಭಾಶಯ ತಿಳಿಸಿದರು.
ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲು ತಿರುವನಂತಪುರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಯೋಜಿತ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಉಪಸ್ಥಿತರಿದ್ದರು.
ಕೇರಳಂನ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ವಿಪಕ್ಷ ನಾಯಕ, ಕಾಂಗ್ರೆಸ್ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಕುಶಲೋಪಹರಿ ವಿಚಾರಿಸಿದರು, ಈ ಸಂದರ್ಭದಲ್ಲಿ ಕೆ ಸಿ ವೇಣುಗೋಪಾಲ್ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ , ಲೋಕಸಭಾ ಸದಸ್ಯ ಪ್ರಿಯಾಂಕ ಗಾಂಧಿ, ಬಿಡಿಎ ಅಧ್ಯಕ್ಷರಾದ ಹ್ಯಾರಿಸ್ , ಇತರ ಕಾಂಗ್ರೆಸ್ನ ನಾಯಕರು ಮುಖಂಡರು ಹಾಗೂ ಕೇರಳ ಕಾಂಗ್ರೆಸ್ನ ಮಂತ್ರಿಗಳು ಉಪಸ್ಥಿತರಿದ್ದರು.