LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸನ ಸಭೆಗಳಿಗೆ ಆರ್ಥಿಕ ಸ್ವಾಯತ್ತತೆ ನೀಡಿಕೆಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಗ್ರಹ

ನವದೆಹಲಿ: ಶಾಸನ ಸಭೆಗಳ ಸ್ವತಂತ್ರ, ಪಕ್ಷಾತೀತ ಕಾರ್ಯನಿರ್ವಹಣೆ ದೃಷ್ಠಿಯಿಂದ ಅವುಗಳಿಗೆ ಆರ್ಥಿಕ ಸ್ವಾಯತ್ತತೆ ನೀಡುವುದು ಅಗತ್ಯವಾಗಿದ್ದು, ಆ ನಿಟ್ಟಿನಲ್ಲಿ ಸೂಕ್ತ ಕಾನೂನಗಳಡಿ ಕಟ್ಟುನಿಟ್ಟಿನ ಕ್ರಮ ಅವಶ್ಯಕವಾಗಿದೆಯೆಂದು ಕರ್ನಾಟಕ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಮನವಿ ಮಾಡಿದರು.

ನವದೆಹಲಿಯ ನೂತನ ಸಂಸದ ಭವನದಲ್ಲಿ ಇಂದಿನಿಂದ ಆರಂಭಗೊಂಡ ಎರಡು ದಿನಗಳ 10ನೇ ಕಾಮನ್‍ವೆಲ್ತ್ ಸಂಸದೀಯ ಸಂಘದ ಭಾರತ ವಲಯದ ಸಮ್ಮೇಳನದ ಅಂಗವಾಗಿ ಜರುಗಿದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಬಸವರಾಜ ಹೊರಟ್ಟಿ ಅವರು, ಶಾಸನ ಸಭೆಗಳ ಸಚಿವಾಲಯಕ್ಕೆ ಆರ್ಥಿಕ ಸ್ವಾಯತ್ತತೆ ಮತ್ತು ಸ್ವಾಯತ್ತ ಸ್ಥಾನ-ಮಾನ ನೀಡುವ ಕುರಿತು ಕಾನೂನು ಮೂಲಕ ಸೂಕ್ತ ನಿರ್ಧಾರ ಕೈಗೊಂಡು ಸದನಗಳ ಗೌರವ, ಘನತೆ ಹಾಗೂ ಪ್ರಾಮುಖ್ಯತೆ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಲೋಕ ಸಭಾಧ್ಯಕ್ಷರು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಪ್ರತಿಯೊಂದು ಆರ್ಥಿಕ ಸಂಪನ್ಮೂಲಕ್ಕೂ ಸರಕಾರಗಳನ್ನು ಹಾಗೂ ಆರ್ಥಿಕ ಇಲಾಖೆ ಅಧಿಕಾರಿಗಳ ಮೊರೆ ಹೋಗುವುದು ಸೂಕ್ತವಾದುದಲ್ಲ, ಹಾಗೂ ಈ ಪ್ರಕ್ರಿಯೆಯಿಂದ ಆರ್ಥಿಕ ಅನುದಾನ ಪಡೆಯಲು ಅತೀ ಹೆಚ್ಚಿನ ಸಮಯ ಹಾಗೂ ಶ್ರಮದ ಅವಶ್ಯಕತೆಯಿದ್ದು ಅಲ್ಲದೇ ಇದರಿಂದ ಶಾಸನ ಸಭೆಗಳ ಸ್ವಾಯತ್ತತೆಗೆ ಅಡ್ಡಿ ಉಂಟಾಗುತ್ತಿದೆ ಎಂದು ವಿವರಿಸಿದರು.

ಶಾಸನ ಸಭೆ ಅಧಿವೇಶನಗಳ ಕುರಿತು ಪ್ರಸ್ತಾಪಿಸಿದ ಬಸವರಾಜ ಹೊರಟ್ಟಿ, ವಾರ್ಷಿಕವಾಗಿ ಕನಿಷ್ಠ 60 ದಿನಗಳ ಕಾಲ ಅಧಿವೇಶನ ನಡೆಸುವುದನ್ನು ಕಡ್ಡಾಯಗೊಳಿಸಬೇಕು. ಶಾಸನ ಸಭೆಗಳು ಜನಸಾಮಾನ್ಯರ ದೈನಂದಿನ ಬದುಕಿನ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸುವ ಸೂಕ್ತ ವೇದಿಕೆಯಾಗಿವೆ. ಆದ್ದರಿಂದ ಪ್ರತಿ ವರ್ಷವೂ ಶಾಸನಸಭೆಗಳು ಕನಿಷ್ಠ 60 ದಿನಗಳ ಕಾಲ ಅಧಿವೇಶನ ನಡೆಸಿ ಪ ಇಲ್, ರಾಜ್ಯಸಭೆ ಉಪಸಭಾಪತಿ ಹರಿವಂಶ್ ನಾರಾಯಣ ಸಿಂಗ್, ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್, ಕರ್ನಾಟಕದ ಉಭಯ ಸದನದ ಕಾರ್ಯದರ್ಶಿಗಳಾದ ಕೆ.ಆರ್. ಮಹಾಲಕ್ಷ್ಮೀ, ವಿಶಾಲಾಕ್ಷಿ, ಸಭಾಪತಿಯವರ ವಿಶೇಷ ಕರ್ತವ್ಯಾಧಿಕಾರಿ ಡಾ.ಮಹೇಶ ವಾಳ್ವೇಕರ್ ಸೇರಿದಂತೆ ವಿವಿಧ ರಾಜ್ಯಗಳ ವಿಧಾನ ಸಭಾಧ್ಯಕ್ಷರು ಹಾಗೂ ಸಭಾಪತಿಗಳು ಸಮ್ಮೇಳನದಲ್ಲಿ ಪಾಲ್ಗೊಂಡಿದ್ದಾರೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ