LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

 ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವುದನ್ನು ಬೆಂಬಲಿಸಿ ಪಾದಯಾತ್ರೆ

ಬೆಂಗಳೂರು: ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು 2019ರಲ್ಲಿ ಗುತ್ತಿಗೆ, ಅರೆಗುತ್ತಿಗೆ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಸುಮಾರು 19 ಸಾವಿರಕ್ಕೂ ಹೆಚ್ಚು ಉಪನ್ಯಾಸಕರ ಉದ್ಯೋಗವನ್ನು ಖಾಯಂ ಮಾಡುವ ಮೂಲಕ ಸೇವಾ ಭದ್ರತೆ ಕಲ್ಪಿಸಿದ್ದಾರೆ. ದೆಹಲಿಯಲ್ಲಿ ಸಾಧ್ಯವಾಗಿರುವಂತದ್ದು ಕರ್ನಾಟಕದಲ್ಲಿ ಏಕೆ ಸಾಧ್ಯವಿಲ್ಲ? 11 ಸಾವಿರ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವ ಆರ್ಥಿಕ ಶಕ್ತಿ ರಾಜ್ಯ ಸರ್ಕಾರಕ್ಕಿಲ್ಲವೇ? ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರು ಕಿಡಿಕಾರಿದ್ದಾರೆ.

ಸೇವಾ ಭದ್ರತೆಗೆ ಆಗ್ರಹಿಸಿ ರಾಜ್ಯ ಅತಿಥಿ ಉಪನ್ಯಾಸಕರ ಸಂಘವು ಬುಧವಾರ ನೆಲಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ವರೆಗೆ ನಡೆಸಿದ ಪಾದಯಾತ್ರೆ ಹೋರಾಟದಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು.

ಹರಿಯಾಣದಲ್ಲೂ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಲಾಗಿದೆ. ಪಂಜಾಬ್‌ನಲ್ಲಿಯೂ ಈ ನಿಟ್ಟಿನಲ್ಲಿ ಪ್ರಮುಖ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಭ್ರಷ್ಟಾಚಾರವನ್ನು ನಿಯಂತ್ರಿಸಿದರೆ ಕರ್ನಾಟಕದಲ್ಲಿಯೂ ಸಾಧ್ಯವಾಗಲಿದೆ. ದೆಹಲಿ ಮಾದರಿಯಲ್ಲಿ ರಾಜ್ಯದಲ್ಲಿಯೂ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿದರೆ, ಅವರ ಬೇಡಿಕೆಗಳನ್ನು ಈಡೇರಿಸಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೊಡ್ಡವರಾಗುತ್ತಾರೆ ಎಂದು ಮುಖ್ಯಮಂತ್ರಿ ಚಂದ್ರು ಸಲಹೆ ನೀಡಿದರು.

ಅತಿಥಿ ಉಪನ್ಯಾಸಕರು ದಕ್ಷತೆಯಿಂದ ಕೆಲಸ ಮಾಡಿದ್ದಕ್ಕೆ ನ್ಯಾಯಯುತವಾಗಿ ಸಲ್ಲಬೇಕಾದ ಹಕ್ಕುಗಳ ಬಗ್ಗೆ ತಮ್ಮ ಬೇಡಿಕೆಯನ್ನು ರಾಜ್ಯ ಸರ್ಕಾರದ ಮುಂದಿಟ್ಟಿದ್ದಾರೆ. ಇದು ಹತ್ತಾರು ವರ್ಷಗಳಿಂದ ಇರುವ ಸಮಸ್ಯೆ. ಅವರ ಭವಿಷ್ಯದ ಸಮಸ್ಯೆ. ಅವರ ಮಕ್ಕಳ ಬದುಕಿನ ಸಮಸ್ಯೆ. ನಿಯಮಗಳ ಪ್ರಕಾರ ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಕೈಚೆಲ್ಲುವುದರಲ್ಲಿ ಅರ್ಥವಿಲ್ಲ. ಕಾನೂನು, ನೀತಿ, ನಿಯಮಗಳು ಸಮಾಜದ ಹಿತದೃಷ್ಟಿಗೆ ಅನುಗುಣವಾಗಿರಬೇಕು. ಸಾಧ್ಯವಿಲ್ಲ ಎನ್ನುವುದು ಉತ್ತರವಲ್ಲ, ಸಾಧ್ಯವಾಗಿಸುವುದು ಉತ್ತರವಾಗಿದೆ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದರು.

ನೆಲಮಂಗಲದ ಪವಾಡ ಶ್ರೀ ಬಸವಣ್ಣ ದೇವರ ಮಠದಿಂದ ಸಾಗಿದ ಪಾದಯಾತ್ರೆಯಲ್ಲಿ ಪಕ್ಷದ ಯುವ ಘಟಕದ ಅಧ್ಯಕ್ಷ ಲೋಹಿತ್‌ ಹನುಮಾಪುರ, ಸಂಘಟನಾ ಕಾರ್ಯದರ್ಶಿ ಜಗದೀಶ್‌ ಚಂದ್ರ ಸೇರಿದಂತೆ ರವಿಕುಮಾರ್ ,ದರ್ಶನ್ ಜೈನ್, ರಾಮಕೃಷ್ಣಪ್ಪ ಹಲವು ಮುಖಂಡರುಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ