LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಂಗ್  ಆಯ್ತು ರೈಟ್ ವರ್ಡ್ಸ್ ಯಾವಾಗ? ವಿಡಿಯೋ ಹಾಡು ಬಿಡುಗಡೆ

ಬೆಂಗಳೂರು:  ಸರ್ಕಾರವು ಹೊರತರುತ್ತಿರುವ ಹೊಸ ಮಸೂದೆ ಕುರಿತು ಅರಿವು ಮೂಡಿಸುವ ’ರಾಂಗ್ ವರ್ಡ್ಸ್’ ವಿಡಿಯೋ ಆಲ್ಬಂ ಇತ್ತೀಚೆಗೆ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ಬಿಡುಗಡೆಗೊಂಡಿತು.


 ರ‍್ಯಾಡಿಕಲ್ ಕಾನ್ಸೆಪ್ಟ್ ಸ್ಟುಡಿಯೋ ನಿರ್ಮಾಣದ ಜವಬ್ದಾರಿಯನ್ನು ಹೊತ್ತುಕೊಂಡಿದೆ. ಬೆಂಗಳೂರು ಮೂಲದ ಯುವ ಪ್ರತಿಭೆ  *ನಹೇಶ್ ಪೂಲ್ ವೃತ್ತಿಯಲ್ಲಿ  ಆಟೋಮೊಬೈಲ್ ಇಂಜಿನಿಯರ್ ಆಗಿದ್ದರೂ ಪ್ರವೃತ್ತಿಯಲ್ಲಿ ಫಿಲಂ ಮೇಕರ್.  ಇದರಿಂದಲೇ ಸದರಿ ಗೀತೆಗೆ ಸಾಹಿತ್ಯ, ಸಂಗೀತ, ನಿರ್ದೇಶನ ಜತೆಗೆ ಐದು ನಿಮಿಷದ ಹಾಡಿನಲ್ಲಿ ಕಾಣಿಸಿಕೊಂಡಿರುವುದು ವಿಶೇಷವಾಗಿದೆ.


       ಈ ಸಂದರ್ಭದಲ್ಲಿ ಮಾತನಾಡಿದ ನಹೇಶ್ ಪೂಲ್, ಕಳೆದ ತಿಂಗಳು ’ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ಅಥವಾ ಸಮುದಾಯದ ವಿರುದ್ದ ಯಾವುದೇ ವ್ಯಕ್ತಿ ಮಾತನಾಡಿದರೆ ಅಪರಾಧ ಎಂದು 50 ಸಾವಿರ ದಂಡ, 7 ವರ್ಷ ಜೈಲು ಶಿಕ್ಷೆ ಎಂಬುದರ ಬಗ್ಗೆ ಮಸೂದೆ ಹೊರಡಿಸಿದೆ. ಆದರೆ ರಾಜ್ಯದಲ್ಲಿ ಇಲ್ಲಿಯವರೆಗೂ ರಾಜ್ಯಪಾಲರಿಂದ ಹಸಿರು ನಿಶಾನೆ ಸಿಕ್ಕಿಲ್ಲ. ಇಂತಹ ಮಸೂದೆ ಸಾರ್ವಜನಿಕರಿಗೆ ಮಾಹಿತಿ ತಿಳಿದಿರುವುದಿಲ್ಲ. ಅದಕ್ಕಾಗಿ ಹಾಡಿನ ಮೂಲಕ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದೇನೆ.


ನಾನು ತಪ್ಪಾದ ಪದಗಳನ್ನು ಬಳಸಲು ಸಾಧ್ಯವಿಲ್ಲ. ಅವುಗಳನ್ನು ಬಳಸಿದರೆ ನನ್ನನ್ನು ಬಂದಿಸುತ್ತಾರೆ. ನನಗೆ ಬೇರೆ ಯಾವುದೇ ಪದಗಳಿಲ್ಲ. ಜೊತೆಗೆ ನಾವು ಜನರಿಗೆ ಮರಳಿ ಕೊಡುವಂತಹ ಒಂದು ಮಾದರಿ ರಸ್ತೆಯನ್ನು ನಿರ್ಮಿಸಲು ಪ್ರಯತ್ನಿಸುತ್ತಿದ್ದೇವೆ. ವಿಧಾನಸೌದ ಮೆಟ್ಟಲುಗಳಿಂದ ಹಿಡಿದು ಪ್ರತಿಯೊಂದು ಹಂತವನ್ನು ನೇರ ಪ್ರಸಾರವಾಗಿ ತೋರಿಸಿ, ಪಾರದರ್ಶಕತೆಯೊಂದಿಗೆ ರಸ್ತೆಯನ್ನು ನಿರ್ಮಿಸುವುದು ನನ್ನ ಗುರಿಯಾಗಿದೆ. ಉತ್ತಮ ವ್ಯವಸ್ಥೆಯನ್ನು  ನಿರ್ಮಿಸಲು ನನಗೆ ಸಹಾಯ ಮಾಡಿ ಎನ್ನುವಂತಹ ಅಂಶಗಳು ಇದರಲ್ಲಿ ತೋರಿಸಲಾಗಿದೆ. ವಿಧಾನಸೌದ ಮುಂಬಾಗ ಒಂದು ದಿನ ಚಿತ್ರೀಕರಣ ಮಾಡಲಾಗಿದೆ ಎಂದು ಗಿಟಾರ್ ನುಡಿಸಿ ಮಾಧ್ಯಮ ಮಿತ್ರರನ್ನು ರಂಜಿಸಿದರು.


ಹಾಡು ಬಿಡುಗಡೆ ವೇಳೆ ರ್ಯಾಡಿಕಲ್ಸ್ ಕ್ರಿಯೇಟೀವ್‌ನ  ಮುಖ್ಯಸ್ಥೆ ಅಕ್ಷರಸುರೇಶ್, ಛಾಯಾಗ್ರಹಣ-ಸಂಕಲನ ಸಾಗರ್ ಅವರದಾಗಿದೆ. ಇದೊಂದು ವಿಶೇಷತೆಯುಳ್ಳ ಆಲ್ ಬಂಬ್ ಇದಾಗಿದ್ದು, ಜನ ಸಾಮಾನ್ಯರೆಲ್ಲ ನೋಡಲೇಬೇಕಾಗಿದೆ. ಪ್ರಸ್ತುತ ನಡೆಯುವ ಸನ್ನಿವೇಶಗಳನ್ನು ಕುರಿತು ಚಿತ್ರೀಕರಣ ಹಾಗೂ ಚಿತ್ರಕಥೆ ಇದೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ